38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಪ್ರಯುಕ್ತ `ಏಕಾಹ ಭಜನಾ ಕಾರ್ಯಕ್ರಮ ಮತ್ತು ಭಜನಾ ಕಮ್ಮಟೋತ್ಸವ

ಶಿರ್ಲಾಲು : ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರು ಶಿರ್ಲಾಲು, ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು-ಶಿರ್ಲಾಲು ಶ್ರೀ ದೇವಿ ಮಹಿಳಾ ಕೇಂದ್ರ ಬದ್ಯಾರು-ಶಿರ್ಲಾಲು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಶಿರ್ಲಾಲು ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಪ್ರಯುಕ್ತ `ಏಕಾಹ ಭಜನಾ ಕಾರ್ಯಕ್ರಮ ಮತ್ತು ಭಜನಾ ಕಮ್ಮಟೋತ್ಸವ ಎ.15 ರಂದು ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರು ನಲ್ಲಿ ನಡೆಯಲಿದೆ.

ಬೆಳಿಗ್ಗೆ ಪೂಜೆ, ಏಕಾಹ ಭಜನಾ ಕಾರ್ಯಕ್ರಮ ಮಧ್ಯಾಹ್ನ ಮಹಾಪೂಜೆ, ತೀರ್ಥಪ್ರಸಾದ, ಅನ್ನಸಂತರ್ಪಣೆ, ಸಂಜೆ ಬೆಳ್ಳಿಹಬ್ಬದ ಕಾರ್ಯಕ್ರಮ , ಸಂಜೆ 6.00 ಭಜನಾ ಕಮ್ಮಟೋತ್ಸವ ನಡೆಯಲಿದೆ.

ಸಂಜೆ ನಡೆಯುವ ಸಭಾಕಾರ್ಯಕ್ರಮದಲ್ಲಿ ಪಾಂಗಾಲ್ದಾಡಿ ಬ್ರಹ್ಮಶ್ರೀ ವೇದಮೂರ್ತಿ ನಡ್ವಂತಾಡಿ ಶ್ರೀಪಾದ ಪಾಂಗಾಣ್ಣಯ ತಂತ್ರಿಗಳು ಆಶೀರ್ವಚನ ನೀಡಲಿದ್ದಾರೆ.

ಉದ್ಘಾಟನೆಯನ್ನು ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ। ಪದ್ಮಪ್ರಸಾದ ಅಜಿಲರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಶ್ರೀ ಬದ್ಯಾರು-ಶಿರ್ಲಾಲು ಲೋಕನಾಥೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಜಗನ್ನಾಥ ಕುಲಾಲ್ ಬೈರೊಟ್ಟು ವಹಿಸಲಿದ್ದಾರೆ ಹಾಗೂ ಮುಖ್ಯ ಅತಿಥಿಗಳಾಗಿ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ.

Related posts

ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಉಜಿರೆ ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸೇತುಬಂಧ ಕಾರ್ಯಕ್ರಮ

Suddi Udaya

ನಾಳ ಯಕ್ಷಕೂಟದ ವತಿಯಿಂದ ಯಕ್ಷಗಾನ ವೈಭವ

Suddi Udaya

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀರಾಮೋತ್ಸವ: ಕರಸೇವಕರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಒಂಭತ್ತನೇ ಸುತ್ತಿನಲ್ಲಿ 7398 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya
error: Content is protected !!