July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಪ್ರಯುಕ್ತ `ಏಕಾಹ ಭಜನಾ ಕಾರ್ಯಕ್ರಮ ಮತ್ತು ಭಜನಾ ಕಮ್ಮಟೋತ್ಸವ

ಶಿರ್ಲಾಲು : ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರು ಶಿರ್ಲಾಲು, ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು-ಶಿರ್ಲಾಲು ಶ್ರೀ ದೇವಿ ಮಹಿಳಾ ಕೇಂದ್ರ ಬದ್ಯಾರು-ಶಿರ್ಲಾಲು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಶಿರ್ಲಾಲು ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಪ್ರಯುಕ್ತ `ಏಕಾಹ ಭಜನಾ ಕಾರ್ಯಕ್ರಮ ಮತ್ತು ಭಜನಾ ಕಮ್ಮಟೋತ್ಸವ ಎ.15 ರಂದು ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರು ನಲ್ಲಿ ನಡೆಯಲಿದೆ.

ಬೆಳಿಗ್ಗೆ ಪೂಜೆ, ಏಕಾಹ ಭಜನಾ ಕಾರ್ಯಕ್ರಮ ಮಧ್ಯಾಹ್ನ ಮಹಾಪೂಜೆ, ತೀರ್ಥಪ್ರಸಾದ, ಅನ್ನಸಂತರ್ಪಣೆ, ಸಂಜೆ ಬೆಳ್ಳಿಹಬ್ಬದ ಕಾರ್ಯಕ್ರಮ , ಸಂಜೆ 6.00 ಭಜನಾ ಕಮ್ಮಟೋತ್ಸವ ನಡೆಯಲಿದೆ.

ಸಂಜೆ ನಡೆಯುವ ಸಭಾಕಾರ್ಯಕ್ರಮದಲ್ಲಿ ಪಾಂಗಾಲ್ದಾಡಿ ಬ್ರಹ್ಮಶ್ರೀ ವೇದಮೂರ್ತಿ ನಡ್ವಂತಾಡಿ ಶ್ರೀಪಾದ ಪಾಂಗಾಣ್ಣಯ ತಂತ್ರಿಗಳು ಆಶೀರ್ವಚನ ನೀಡಲಿದ್ದಾರೆ.

ಉದ್ಘಾಟನೆಯನ್ನು ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ। ಪದ್ಮಪ್ರಸಾದ ಅಜಿಲರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಶ್ರೀ ಬದ್ಯಾರು-ಶಿರ್ಲಾಲು ಲೋಕನಾಥೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಜಗನ್ನಾಥ ಕುಲಾಲ್ ಬೈರೊಟ್ಟು ವಹಿಸಲಿದ್ದಾರೆ ಹಾಗೂ ಮುಖ್ಯ ಅತಿಥಿಗಳಾಗಿ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ.

Related posts

ಎಸ್‌ಡಿಯಂ ಇಂಜಿನಿಯರಿಂಗ್ ಕಾಲೇಜು: ಸ್ಟಾರ್ಟಅಪ್‌ಗಾಗಿ ಒಡಂಬಡಿಕೆ ಸಹಿ

Suddi Udaya

ಕಣಿಯೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಯತೀಶ್ ಶೆಟ್ಟಿ ಪಣೆಕ್ಕರ ಆಯ್ಕೆ

Suddi Udaya

ತಾಲೂಕಿನಲ್ಲಿ ಅತೀ ಹೆಚ್ಚು ಕೃಷಿ ಉಪಕರಣ ಖರೀದಿಸಿದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬಳಂಜ ಶಾಲಾ ಮಕ್ಕಳನ್ನು ಕರೆದೊಯ್ದ ಪಿಕಪ್ & ಟಿಪ್ಪರ್ ಚಾಲಕರ ವಿರುದ್ಧ ಪ್ರಕರಣ ದಾಖಲು

Suddi Udaya

ಶಿರ್ಲಾಲು: ಅನಾರೋಗ್ಯದಿಂದ ಹೊನ್ನಮ್ಮ ನಿಧನ

Suddi Udaya
error: Content is protected !!