22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತುಮಕೂರಿನಲ್ಲಿ ಕಾರಿಗೆ ಬೆಂಕಿ ಮೂವರ ಕೊಲೆ ಪ್ರಕರಣ: ತುಮಕೂರು ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳ ಬಂಧನ: ಮುರುಡೇಶ್ವರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು

ಬೆಳ್ತಂಗಡಿ : ತುಮಕೂರಿನಲ್ಲಿ ಬೆಳ್ತಂಗಡಿ ಪರಿಸರದ ಶಾಹುಲ್ ಹಮೀದ್, ಸಿದ್ದೀಕ್, ಇಸಾಕ್ ಸಿಮಾಮ್ ರನ್ನು ಅಮಾನುಷವಾಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಮತ್ತೆ ಆರು ಜನರನ್ನು ತುಮಕೂರು ಜಿಲ್ಲೆಯ ಕೋರಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣ: 22-03-2024 ರಂದು ಮಧ್ಯಾಹ್ನ ಸುಮಾರು 1.15 ಗಂಟೆಗೆ ಕೋರಾ ಪೊಲೀಸ್ ಠಾಣಾವ್ಯಾಪ್ತಿಯ ಕುಚ್ಚಂಗಿ ಕೆರೆಯಲ್ಲಿ ಒಂದು ಕಾರಿನಲ್ಲಿ 3 ಮಂದಿಯ ದೇಹಗಳು ಸುಟ್ಟ ಸ್ಥಿತಿಯಲ್ಲಿರುವ ಬಗ್ಗೆ ಬಂದ ಮಾಹಿತಿಯ ಮೇರೆಗೆ ಕೋರಾ ಪೊಲೀಸ್ ಠಾಣೆಯ ಪಿಎಸ್‌ಐ ರವರು ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಒಂದು ಮಾರುತಿ ಸುಜುಕಿ S-PRESSO ಕಾರಿನ ಹಿಂಭಾಗದ ಸೀಟಿನಲ್ಲಿ ಒಂದು ಮತ್ತು ಡಿಕ್ಕಿಯಲ್ಲಿ ಎರಡು ದೇಹಗಳು ಸುಟ್ಟು ಕರಕಲಾಗಿದ್ದು, ಯಾರೋ ದುಷ್ಕರ್ಮಿಗಳು ಯಾರೋ 3 ಜನರನ್ನು ಯಾವುದೋ ಕಾರಣಕ್ಕೆ ಕೊಲೆ ಮಾಡಿ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಕಾರಿನಲ್ಲಿ ಹಾಕಿ ಪೆಟ್ರೋಲ್ ಅಥವಾ ಬೇರಾವುದೋ ಇಂಧನ ಸುರಿದು ಬೆಂಕಿ ಹಚ್ಚಿ ಸುಟ್ಟಿರೋದು ಕಂಡು ಬಂದಿತ್ತು. ಅದರಂತೆ ಕೋರಾ ಪೊಲೀಸ್ ಪ್ರಕರಣ ದಾಖಲಾಗಿತ್ತು.

ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮೂವರಿದ್ದ ಕಾರಿನ ನಂಬರಿನ ಮೂಲಕ ಮಾಹಿತಿ ಸಂಗ್ರಹಿಸಿ ಇಬ್ಬರು ಆರೋಪಿಗಳಾದ ಪಾತರಾಜು @ರಾಜು ಮತ್ತು ಗಂಗರಾಜು ಎಂಬವರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿತ್ತು.

ಪ್ರಮುಖ ಆರೋಪಿಗಳ ಬಂಧನ: ತುಮಕೂರಿನ ಶಿರಾ ಗೇಟ್‌ನಲ್ಲಿ ವಾಸವಿರುವ ಪಾತರಾಜು @ ರಾಜು @ ರಾಜಗುರು @ಕುಮಾರ್, ಇನ್ನೊರ್ವ ಆರೋಪಿ ಸತ್ಯಮಂಗಲದ ವಾಸಿ ಗಂಗರಾಜು ಬಿನ್ ಹನುಮಂತರಾಯಪ್ಪ ಎಂಬಾತನನ್ನು ಮಾ.25 ರಂದು ಬಂಧಿಸಿ ಏಳು ದಿನಗಳ ಪೊಲೀಸ್ ಕಸ್ಟಡಿ ಪಡೆದಿದ್ದಾರೆ.

ಆರು ಜನರ ಬಂಧನ: ಪ್ರಕರಣ ಬಳಿಕ ಪರಾರಿಯಾದ ಆರು ಜನ ಆರೋಪಿಗಳಾದ ಪುಟ್ಟಸ್ವಾಮಯ್ಯನ ಪಾಳ್ಯದ ಮಧುಸೂದನ್(24) , ಸಂತೇಪೇಟೆಯ ನವೀನ್(24) ,ವೆಂಕಟೇಶಪುರದ ಕೃಷ್ಣ(22), ಹೊಂಬಯ್ಯನಪಾಳ್ಯದ ಗಣೇಶ್(19), ನಾಗಣ್ಣನಪಾಳ್ಯದ ಕಿರಣ್(23) ,ಕಾಳಿದಾಸನಗರದ ಸೈಮನ್(18) ಸೇರಿ ಆರು ಜನರನ್ನು ಮುರುಡೇಶ್ವರದ ಲಾಡ್ಜ್ ನಲ್ಲಿ ಮಾ.26 ರಂದು ಸಂಜೆ ಬಂಧಿಸಿ ತುಮಕೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಏಳು ದಿನಗಳ ಪೊಲೀಸ್ ಕಸ್ಟಡಿ ನೀಡಿದೆ.

ಪ್ರಮುಖ ಆರೋಪಿ ಮಾಹಿತಿ ಮೇರೆಗೆ ಪರಾರಿಯಾಗಿದ್ದ ಆರು ಜನರು: ಆರು ಜನ ಆರೋಪಿಗಳು ತುಮಕೂರಿನಲ್ಲಿ ಹೂ ಮಾರಾಟದ ಲೈನ್ ನಲ್ಲಿ ಕೆಲಸ ಮಾಡುವ ಯುವಕರಾಗಿದ್ದು ಮೂರು ಕೆಜಿ ಚಿನ್ನ ಸಿಗುವ ಆಸೆಯಲ್ಲಿ ಪಾತರಾಜ್ ಮಾಹಿತಿಯಂತೆ ಕೇವಲ 8,000 ಹಣವನ್ನು ಪಡೆದು ಕೊಲೆ ಮಾಡಿದ್ದಾರೆ. ಬಳಿಕ ರೈಲು ಮೂಲಕ ಮುರುಡೇಶ್ವರದ ಲಾಡ್ಜ್ ನಲ್ಲಿ ಉಳಿದುಕೊಂಡಿದ್ದರು‌. ಪಾತರಾಜ್ ಬಂಧನವಾಗಿ ಪೊಲೀಸರ ವಿಚಾರಣೆಯಲ್ಲಿ ಉಳಿದ ಆರು ಜನ ಆರೋಪಿಗಳ ಮಾಹಿತಿ ನೀಡಿದ್ದ‌ ಎನ್ನಲಾಗಿದೆ.

ಕೊಲೆಗೆ 15 ಲೀಟರ್ ಪೆಟ್ರೋಲ್ ಬಳಕೆ : ಕೊಲೆ ಮಾಡಿದ ಬಳಿಕ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಲು ಆರೋಪಿಗಳು ಪಕ್ಕದ ಪೆಟ್ರೋಲ್ ಪಂಪ್ ನಿಂದ 15 ಲೀಟರ್ ಪೆಟ್ರೋಲ್ ಖರೀದಿ ಮಾಡಿ ತಂದಿರುವ ಬಗ್ಗೆ ಪೊಲೀಸರಿಗೆ ಸಿಸಿಕ್ಯಾಮರದ ದೃಶ್ಯ ಸಾಕ್ಷಿಯಾಗಿ ಸಿಕ್ಕಿದೆ‌.

Related posts

ಉಜಿರೆ ಯುವ ವಾಹಿನಿ ಸಂಚಲನಾ ಸಮಿತಿ ಮತ್ತು ಶ್ರೀ ಗುರುನಾರಾಯಣ ಸೇವಾ ಸಂಘದ ಆಶ್ರಯದಲ್ಲಿ ಗುರುಪೂಜೆ

Suddi Udaya

ಧರ್ಮಸ್ಥಳ: ಡಾ.ಹೆಗ್ಗಡೆಯವರ ರಾಜ್ಯ ಸಭಾ ನಿಧಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya

ಬೆಳ್ತಂಗಡಿ: ಪ್ರಭಾರ ಶಿಕ್ಷಣಾಧಿಕಾರಿ ಕಾರಿನ ಮೇಲೆ ಮರ ಬಿದ್ದು ಹಾನಿ

Suddi Udaya

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟ ಪ್ರತೀಕ್ಷಾ ಪ್ರಕರಣ: ದ.ಕ. ಜಿಲ್ಲಾ ಮೆಸ್ಕಾಂ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ: ಹೆಚ್ಚುವರಿ ಪರಿಹಾರ ನೀಡುವಂತೆ ಮನವಿ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya
error: Content is protected !!