23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹಳದಿ ದಿನ ಆಚರಣೆ

ಪಟ್ರಮೆ :ಇಲ್ಲಿಯ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯ ನರ್ಸರಿ ವಿಭಾಗದಿಂದ ಹಳದಿ ದಿನ ಆಚರಿಸಲಾಯಿತು.


ಎಲ್ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳಿಗೆ ಹಳದಿ ಬಣ್ಣದ ಮಹತ್ವ, ಬಳಕೆ ಮತ್ತು ಉಪಯೋಗದ ಬಗ್ಗೆ ಪ್ರಾಯೋಗಿಕ ಜ್ಞಾನ ನೀಡುವುದಕ್ಕಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು.


ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಶೇಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಈ ರೀತಿಯ ಪ್ರಾಯೋಗಿಕವಾಗಿ ಕಾರ್ಯಕ್ರಮಗಳನ್ನು ಮಾಡಿದಾಗ ಬೇಗನೆ ಕಲಿತುಕೊಳ್ಳುತ್ತಾರೆ. ಕೇವಲ ಓದುವುದು ಬರೆಯುವುದು ಮಾತ್ರವಲ್ಲದೆ ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳ ಕಲಿಕೆಗೆ ಸಹಕಾರಿಯಾಗುತ್ತದೆ ಎಂದರು.


ಶಾಲಾ ಆಂಗ್ಲ ಭಾಷಾ ದಿಲೀಪ್ ವಿದ್ಯಾರ್ಥಿಗಳಿಗೆ ಹಳದಿ ಬಣ್ಣದ ಮಹತ್ವವನ್ನು ತಿಳಿಸುವುದರೊಂದಿಗೆ, ಪ್ರಾಮುಖ್ಯತೆ, ಹಾಗೂ ಪ್ರಯೋಜನವನ್ನು ತಿಳಿಸಿದರು. ನರ್ಸರಿ ವಿಭಾಗದ ಮೇಲ್ವಿಚಾರಕಿ ಸ್ವಾತಿ ಕೆ. ವಿ, ಶಿಕ್ಷಕಿ ವನಿತಾ ಸಹ ಶಿಕ್ಷಕರಾದ ಸುಪ್ರೀತಾ ಎ, ಶ್ವೇತ ಕುಮಾರಿ ಎಂ ಪಿ, ಶುಭಲಕ್ಷ್ಮಿ, ರೇಶ್ಮಾ, ಕಲ್ಪನಾ ಚಿಪಳೂಣ್ಕರ್, ಭವ್ಯ ಪಿ.ಡಿ, ಕುಸುಮಾವತಿ ಸಹಕರಿಸಿದರು.

Related posts

ತಣ್ಣೀರುಪಂತ: ಮುಂದಿಲ ನಿವಾಸಿ ಸೋಮವಾತಿ ನಿಧನ

Suddi Udaya

ಬೆಳ್ತಂಗಡಿ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ತೆಗೆದುಕೊಂಡ ಒಡವೆಗಳನ್ನು ಯಾಕೆ ಇನ್ನು ಕೊಟ್ಟಿಲ್ಲ ಎಂದು ಪ್ರಶ್ನಿಸಿದ ಮಹಿಳೆಗೆ ಕೈಯಿಂದ ಹೊಡೆದು ಕುತ್ತಿಗೆಯನ್ನು ಹಿಚುಕಿ ಜೀವಬೆದರಿಕೆ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ ಗಳ ಬೇಸಿಗೆ ಶಿಬಿರ

Suddi Udaya
error: Content is protected !!