22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹಳದಿ ದಿನ ಆಚರಣೆ

ಪಟ್ರಮೆ :ಇಲ್ಲಿಯ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯ ನರ್ಸರಿ ವಿಭಾಗದಿಂದ ಹಳದಿ ದಿನ ಆಚರಿಸಲಾಯಿತು.


ಎಲ್ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳಿಗೆ ಹಳದಿ ಬಣ್ಣದ ಮಹತ್ವ, ಬಳಕೆ ಮತ್ತು ಉಪಯೋಗದ ಬಗ್ಗೆ ಪ್ರಾಯೋಗಿಕ ಜ್ಞಾನ ನೀಡುವುದಕ್ಕಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು.


ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಶೇಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಈ ರೀತಿಯ ಪ್ರಾಯೋಗಿಕವಾಗಿ ಕಾರ್ಯಕ್ರಮಗಳನ್ನು ಮಾಡಿದಾಗ ಬೇಗನೆ ಕಲಿತುಕೊಳ್ಳುತ್ತಾರೆ. ಕೇವಲ ಓದುವುದು ಬರೆಯುವುದು ಮಾತ್ರವಲ್ಲದೆ ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳ ಕಲಿಕೆಗೆ ಸಹಕಾರಿಯಾಗುತ್ತದೆ ಎಂದರು.


ಶಾಲಾ ಆಂಗ್ಲ ಭಾಷಾ ದಿಲೀಪ್ ವಿದ್ಯಾರ್ಥಿಗಳಿಗೆ ಹಳದಿ ಬಣ್ಣದ ಮಹತ್ವವನ್ನು ತಿಳಿಸುವುದರೊಂದಿಗೆ, ಪ್ರಾಮುಖ್ಯತೆ, ಹಾಗೂ ಪ್ರಯೋಜನವನ್ನು ತಿಳಿಸಿದರು. ನರ್ಸರಿ ವಿಭಾಗದ ಮೇಲ್ವಿಚಾರಕಿ ಸ್ವಾತಿ ಕೆ. ವಿ, ಶಿಕ್ಷಕಿ ವನಿತಾ ಸಹ ಶಿಕ್ಷಕರಾದ ಸುಪ್ರೀತಾ ಎ, ಶ್ವೇತ ಕುಮಾರಿ ಎಂ ಪಿ, ಶುಭಲಕ್ಷ್ಮಿ, ರೇಶ್ಮಾ, ಕಲ್ಪನಾ ಚಿಪಳೂಣ್ಕರ್, ಭವ್ಯ ಪಿ.ಡಿ, ಕುಸುಮಾವತಿ ಸಹಕರಿಸಿದರು.

Related posts

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿಯಾಗಿ ಸಮಾಜ ಸೇವಕ ಕೆ. ಮೋಹನ್ ಕುಮಾರ್ ಆಯ್ಕೆ

Suddi Udaya

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು ಬಿ.ಕೆ ದೇವರಾಯರಿಗೆ ರೈತಪೀಠ ಪ್ರಶಸ್ತಿ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ: ಅಳದಂಗಡಿ ಅರಮನೆಯ ಅರಸರಾದ ಡಾ.‌ಪದ್ಮಪ್ರಸಾದ್ ರಿಂದ ಗೌರವಾಪ೯ಣೆ

Suddi Udaya

ಲಯನ್ ಹೆರಾಲ್ಡ್ ತಾವ್ರೋ ರವರ ಪ್ರಾಂತ್ಯ ಸಮ್ಮೇಳನಕ್ಕೆ : ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಹಾಗೂ ತುಳುನಾಡ ಮಾಣಿಕ್ಯ ನಟ ಅರವಿಂದ ಬೋಳಾರ್

Suddi Udaya

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya
error: Content is protected !!