September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹಳದಿ ದಿನ ಆಚರಣೆ

ಪಟ್ರಮೆ :ಇಲ್ಲಿಯ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯ ನರ್ಸರಿ ವಿಭಾಗದಿಂದ ಹಳದಿ ದಿನ ಆಚರಿಸಲಾಯಿತು.


ಎಲ್ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳಿಗೆ ಹಳದಿ ಬಣ್ಣದ ಮಹತ್ವ, ಬಳಕೆ ಮತ್ತು ಉಪಯೋಗದ ಬಗ್ಗೆ ಪ್ರಾಯೋಗಿಕ ಜ್ಞಾನ ನೀಡುವುದಕ್ಕಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು.


ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಶೇಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಈ ರೀತಿಯ ಪ್ರಾಯೋಗಿಕವಾಗಿ ಕಾರ್ಯಕ್ರಮಗಳನ್ನು ಮಾಡಿದಾಗ ಬೇಗನೆ ಕಲಿತುಕೊಳ್ಳುತ್ತಾರೆ. ಕೇವಲ ಓದುವುದು ಬರೆಯುವುದು ಮಾತ್ರವಲ್ಲದೆ ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳ ಕಲಿಕೆಗೆ ಸಹಕಾರಿಯಾಗುತ್ತದೆ ಎಂದರು.


ಶಾಲಾ ಆಂಗ್ಲ ಭಾಷಾ ದಿಲೀಪ್ ವಿದ್ಯಾರ್ಥಿಗಳಿಗೆ ಹಳದಿ ಬಣ್ಣದ ಮಹತ್ವವನ್ನು ತಿಳಿಸುವುದರೊಂದಿಗೆ, ಪ್ರಾಮುಖ್ಯತೆ, ಹಾಗೂ ಪ್ರಯೋಜನವನ್ನು ತಿಳಿಸಿದರು. ನರ್ಸರಿ ವಿಭಾಗದ ಮೇಲ್ವಿಚಾರಕಿ ಸ್ವಾತಿ ಕೆ. ವಿ, ಶಿಕ್ಷಕಿ ವನಿತಾ ಸಹ ಶಿಕ್ಷಕರಾದ ಸುಪ್ರೀತಾ ಎ, ಶ್ವೇತ ಕುಮಾರಿ ಎಂ ಪಿ, ಶುಭಲಕ್ಷ್ಮಿ, ರೇಶ್ಮಾ, ಕಲ್ಪನಾ ಚಿಪಳೂಣ್ಕರ್, ಭವ್ಯ ಪಿ.ಡಿ, ಕುಸುಮಾವತಿ ಸಹಕರಿಸಿದರು.

Related posts

ಬೆಳ್ತಂಗಡಿ: ಎಸ್.ಐ.ಟಿ. ಪೊಲೀಸ್ ಠಾಣೆಗೆ ದೂರುದಾರ ಜಯಂತ್ ಟಿ. ಭೇಟಿ

Suddi Udaya

ಎಕ್ಸೆಲ್ ಪುಟಾಣಿಗಳ ” ನಡೆ ಪ್ರಕೃತಿಯ ಕಡೆ” ಕಾರ್ಯಕ್ರಮ

Suddi Udaya

ಬೆದ್ರಬೆಟ್ಟು ಅರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್‌ ಅಝಾ ಆಚರಣೆ

Suddi Udaya

ಉಜಿರೆ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಇಳಂತಿಲ ಗ್ರಾ.ಪಂ. ಗ್ರಾಮ ಸಭೆ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬೃಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ತೆರವುಗೊಳಿಸುವಂತೆ ಹರೀಶ್ ಕಾರಿಂಜ ಒತ್ತಾಯ

Suddi Udaya
error: Content is protected !!