32.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಲಾಡಿ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ. ನಾಪತ್ತೆ ಸಹೋದರನಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

ಮಡಂತ್ಯಾರು : ಮಾಲಾಡಿ ಗ್ರಾಮದ ವಿದ್ಯಾ ನಗರ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯದರ್ಶಿಯಾಗಿರುವ ಲಕ್ಷ್ಮೀನಾರಾಯಣ ಕೆ (52ವ) ಎಂಬವರು, ನಾಪತ್ತೆಯಾಗಿರುವುದಾಗಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಸದ್ರಿಯವರ ಸಹೋದರ ರಮೇಶ್ ಎಂಬವರು ನೀಡಿದ ದೂರಿನಲ್ಲಿ ಸುಮಾರು 6 ವರ್ಷಗಳಿಂದ ಅಮ್ಟಾಡಿ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿಕೊಂಡಿರುವ. ಲಕ್ಷ್ಮೀನಾರಾಯಣ ಅವರು ಮಾ. 27 ರಂದು ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ಹೋಗಿ ಬರುವುದಾಗಿ ತನ್ನ ಪತ್ನಿಗೆ ತಿಳಿಸಿ ಹೋದವರು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ, ಈ ಬಗ್ಗೆ ವಿಷಯ ತಿಳಿದ ಅಮ್ಟಾಡಿ ಪಂಚಾಯತ್‌ ನಲ್ಲಿ ವಿಚಾರಿಸಿದಾಗ, ಸದ್ರಿಯವರು ಮಧ್ಯಾಹ್ನದವರೆಗೆ ಕರ್ತವ್ಯ ನಿರ್ವಹಿಸಿ ಹೋಗಿರುವುದಾಗಿ ತಿಳಿಸಿರುತ್ತಾರೆ.

ಆದರೆ ಲಕ್ಷ್ಮೀನಾರಾಯಣ ಕೆ ರವರು ಮನೆಗೂ ಬಾರದೇ, ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ23/2024ರಂತೆ ನಾಪತ್ತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಅಳದಂಗಡಿಯಲ್ಲಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ, ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

Suddi Udaya

ಕಕ್ಕಿಂಜೆ ಶ್ರೀ  ಕೃಷ್ಣ ಆಸ್ಪತ್ರೆಯಲ್ಲಿ  ಯೋಗಕ್ಷೇಮ,ವಿಸ್ತೃತ ವಸತಿ ಸಮುಚ್ಚಯ  ಮತ್ತು ನೂತನ ಅಂಬ್ಯುಲೆನ್ಸ್ ಲೋಕಾರ್ಪಣೆ 

Suddi Udaya

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ತನಾಜೆ: ವಿಶೇಷ ಸೇವೆ, ಉತ್ಸವಗಳಿಗೆ ತೆರೆ 

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರ ಪೀಠಾರೋಹಣ ವರ್ದಂತಿ: ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಶುಭಾಶಯ

Suddi Udaya

ಲೋಕಸಭಾ ಚುನಾವಣೆ : ನಾಳೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

Suddi Udaya
error: Content is protected !!