September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಲಾಡಿ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ. ನಾಪತ್ತೆ ಸಹೋದರನಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

ಮಡಂತ್ಯಾರು : ಮಾಲಾಡಿ ಗ್ರಾಮದ ವಿದ್ಯಾ ನಗರ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯದರ್ಶಿಯಾಗಿರುವ ಲಕ್ಷ್ಮೀನಾರಾಯಣ ಕೆ (52ವ) ಎಂಬವರು, ನಾಪತ್ತೆಯಾಗಿರುವುದಾಗಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಸದ್ರಿಯವರ ಸಹೋದರ ರಮೇಶ್ ಎಂಬವರು ನೀಡಿದ ದೂರಿನಲ್ಲಿ ಸುಮಾರು 6 ವರ್ಷಗಳಿಂದ ಅಮ್ಟಾಡಿ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿಕೊಂಡಿರುವ. ಲಕ್ಷ್ಮೀನಾರಾಯಣ ಅವರು ಮಾ. 27 ರಂದು ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ಹೋಗಿ ಬರುವುದಾಗಿ ತನ್ನ ಪತ್ನಿಗೆ ತಿಳಿಸಿ ಹೋದವರು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ, ಈ ಬಗ್ಗೆ ವಿಷಯ ತಿಳಿದ ಅಮ್ಟಾಡಿ ಪಂಚಾಯತ್‌ ನಲ್ಲಿ ವಿಚಾರಿಸಿದಾಗ, ಸದ್ರಿಯವರು ಮಧ್ಯಾಹ್ನದವರೆಗೆ ಕರ್ತವ್ಯ ನಿರ್ವಹಿಸಿ ಹೋಗಿರುವುದಾಗಿ ತಿಳಿಸಿರುತ್ತಾರೆ.

ಆದರೆ ಲಕ್ಷ್ಮೀನಾರಾಯಣ ಕೆ ರವರು ಮನೆಗೂ ಬಾರದೇ, ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ23/2024ರಂತೆ ನಾಪತ್ತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ವಿಶ್ವಕರ್ಮ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ: ಸಾನಿಧ್ಯ ಕಲಶಾಭಿಷೇಕ, ಉತ್ಸವಬಲಿ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ಅಪಪ್ರಚಾರ ಕೊನೆಯಾಗುವಂತೆ ಕರವೇ ಮಹಿಳಾ ತಂಡದ ಸದಸ್ಯರಿಂದ ಉರುಳು ಸೇವೆ

Suddi Udaya

ಮಲೆಂಗಲ್ಲು ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭಾ ಕಾರ್ಯಕ್ರಮ: ಶ್ರದ್ಧಾ ಭಕ್ತಿಯಿಂದ ಭಗವಂತನನ್ನು ಆರಾಧಿಸಿ – ಶ್ರೀ ಡಾ.ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು

Suddi Udaya

ಅಗ್ನಿವೀರ್‌ ತರಬೇತಿ ಪೂರೈಸಿ ಇಂದು ಊರಿಗೆ ಆಗಮಿಸಲಿರುವ ರೆಖ್ಯದ ರಂಜಿತ್

Suddi Udaya
error: Content is protected !!