ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲ ದಿನಾಚರಣೆ ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲ ದಿನಾಚರಣೆ ಕಾನೂನು ಅರಿವು ಕಾರ್ಯಕ್ರಮವು ಮಾ.27ರಂದು ನ್ಯಾಯಾಲಯದ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಬೆಳ್ತಂಗಡಿ ತಾ.ಕಾ.ಸೇ.ಸ. ಅಧ್ಯಕ್ಷ ದೇವರಾಜು ಹೆಚ್.ಎಂ. ನೆರವೇರಿಸಿದರು. ಅಧ್ಯಕ್ಷತೆಯನ್ನು ಬೆಳ್ತಂಗಡಿ ಹಿರಿಯ ವಕೀಲರ ಸಮಿತಿ, ವಕೀಲರ ಸಂಘ ಅಧ್ಯಕ್ಷ ಎಲೋಶಿಯಸ್ ಲೋಬೋ ವಹಿಸಿದ್ದರು.

ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಬೆಳ್ತಂಗಡಿ ಜೆ.ಎಂ.ಎಫ್.ಸಿ ವಿಜಯೇಂದ್ರ ಟಿ. ಹೆಚ್ ವಿಶ್ವ ಜಲ ದಿನಾಚರಣೆ ಕುರಿತು ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಬೆಳ್ತಂಗಡಿ ತಾಂ.ಕಾಂ.ಸೇ.ಸಂ ಸದಸ್ಯ ಕಾರ್ಯದರ್ಶಿ ಸಂದೇಶ್ ಕೆ ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ., ಸಹಾಯಕ ಸರ್ಕಾರಿ ಅಭಿಯೋಜಕರಾದ ದಿವ್ಯರಾಜ್, ಶ್ರೀಮತಿ ಆಶಿತಾ ಎಂ. ಉಪಸ್ಥಿತರಿದ್ದರು.

Leave a Comment

error: Content is protected !!