23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಬೇಸಿಗೆ ಶಿಬಿರ

ಉಜಿರೆ : “ಸ್ವಾರ್ಥವಿಲ್ಲದೆ ಸೇವೆ ಮಾಡುವವರು ನಮ್ಮ ಸ್ಕೌಟ್ ವಿದ್ಯಾರ್ಥಿಗಳು. ದೇವರಿಗೆ, ಜನರಿಗೆ ಮತ್ತು ದೇಶಕ್ಕಾಗಿ ನಿಸ್ವಾರ್ಥ ಸೇವೆ ಮಾಡುವವರು ಇವರು” ಎಂದು ಮುಂಡತ್ತೋಡಿ ಸರಕಾರಿ ಶಾಲೆಯ ಮುಖ್ಯ ಶಿಕ್ಷಕಿ ಸೇವಂತಿ. ಬಿ ಹೇಳಿದರು.


ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಆಯೋಜಿಸಿದ್ದ ಸ್ಕೌಟ್ ಗೈಡ್ ಬೇಸಿಗೆ ಶಿಬಿರದ ಉದ್ಘಾಟಕರಾಗಿ ಆಗಮಿಸಿ ಧ್ವಜಾರೋಹಣ ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಭಾರತ್ ಸ್ಕೌಟ್ ಆಂಡ್ ಗೈಡ್ಸ್ ರಾಜ್ಯ ಸಹಾಯಕ ಸಂಘಟನ ಆಯುಕ್ತರಾದ ಭರತ್ ರಾಜ್ ಶಿಬಿರ ಸ್ಥಳಕ್ಕೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು.
ಎಸ್.ಡಿ.ಎಮ್ ಪದವಿ ಕಾಲೇಜಿನ ರೋವರ್ ರೇಂಜರ್ ವಿದ್ಯಾರ್ಥಿಗಳ ಸಹಕಾರದೊಂದಿಗೆ ಶಾಲಾ ಸ್ಕೌಟ್ ಗೈಡ್ ಶಿಕ್ಷಕ ಶಿಕ್ಷಕಿಯರು ಕಾರ್ಯಕ್ರಮ ಆಯೋಜಿಸಿದ್ದರು.

Related posts

ಬಂದಾರು: ಮುಂಡೂರು ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಗಾಳಿ ಮಳೆ: ಕಳಿಯ-ನ್ಯಾಯತರ್ಪು ವ್ಯಾಪಕ ಹಾನಿ15ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

Suddi Udaya

ಬೆಳ್ತಂಗಡಿ ಲ್ಯಾಂಪ್ಸ್ ವಿವಿದೋದ್ದೇಶ ಸಹಕಾರ ಸಂಘದ ಗೋದಾಮು ಮತ್ತು ಮಾರಾಟ ಮಳಿಗೆಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕಾರಿಂಜ ಮಧ್ವ ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೆಳ್ತಂಗಡಿಯ ಯುವಕ ಸ್ಥಳದಲ್ಲೆ ಸಾವು

Suddi Udaya

ಮಡವು ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ನಿಂದ ಮಚ್ಚಿನ ಸ.ಪ್ರೌ. ಶಾಲೆಗೆ 200 ತಟ್ಟೆ ಹಾಗೂ 2 ತಟ್ಟೆ ಇಡುವ ಸ್ಟಾಂಡ್ ಕೊಡುಗೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ 66ನೇ ವರ್ಷದ ಶ್ರೀ ರಾಮ ನಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ

Suddi Udaya
error: Content is protected !!