September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಮಕೂರು ಮೂವರ ಹತ್ಯೆ ಪ್ರಕರಣ: ವಕ್ಫ್ ಜಿಲ್ಲಾ ಸಲಹಾ ಸಮಿತಿ ಪದಾಧಿಕಾರಿಗಳು, ಕಾಜೂರು ಆಡಳಿತ ಸಮಿತಿ ಭೇಟಿ: ಸಾಂತ್ವಾನ ಮತ್ತು ಸಹಾಯದ ಭರವಸೆ

ಬೆಳ್ತಂಗಡಿ: ತುಮಕೂರು ಮೂವರ ಹತ್ಯೆ ಪ್ರಕರಣದಲ್ಲಿ ಪ್ರಾಣ ಕಳೆದುಕೊಂಡಿರುವ ಸಂತ್ರಸ್ತರ ನಿವಾಸಕ್ಕೆ ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿ ಮತ್ತು ಕಾಜೂರು ಆಡಳಿತ‌ ಸಮಿತಿಯ ನಿಯೋಗ ಮಾ.28 ರಂದು ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬುವ ಕಾರ್ಯ ಮಾಡಿತು.


ಕಾಜೂರು ಧರ್ಮಗುರುಗಳಾದ ಝೈನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್, ವಕ್ಫ್ ಜಿಲ್ಲಾ ಸಮಹಾ ಸಮಿತಿ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಅವರ ನೇತೃತ್ವದ ನಿಯೋಗ ಶಾಹುಲ್ ಹಮೀದ್ ಅವರ ಕುಟುಂಬದ ಮನೆಗೆ ಭೇಟಿ ನೀಡಿತು.


ಮೂರೂ ಕುಟುಂಬಗಳು ಸ್ವಂತ ಮನೆ ಇಲ್ಲದೆ, ‌ಇದೀಗ ಮನೆಯ ಯಜಮಾನನ್ನು ಕಳೆದುಕೊಂಡಿದ್ದು ಮತ್ತು ಸಂಕಷ್ಟಕ್ಕೆ ತಳ್ಳಲ್ಪಟ್ಟಿದೆ. ಇದನ್ನು ಮನಗಂಡು ಮುಂದಕ್ಕೆ ಅವರಿಗೆ ಸೂರು ನಿರ್ಮಾಣ ಸಂದರ್ಭದಲ್ಲಿ ಸೂಕ್ತವಾಗಿ ಸ್ಪಂದಿಸುವುದಾಗಿ ಭರವಸೆ ನೀಡಿತು. ಉಳಿದ ಎರಡೂ ಕುಟುಂಬವನ್ನು ಸಂಪರ್ಕಿಸಿ ಸಾಂತ್ವಾನ ಹೇಳಲಾಯಿತು.


ನಿಯೋಗದಲ್ಲಿ ವಕ್ಫ್ ಜಿಲ್ಲಾ ಸಮಿತಿ ಸದಸ್ಯ ಅಶ್ರಫ್ ಕಿನಾರ, ಕಾಜೂರು ಆಡಳಿತ ಸಮಿತಿ ಅಧ್ಯಕ್ಷ ಕೆ‌.ಯು ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿ ಹಾಗೂ ವಕ್ಫ್ ಸಲಹಾ ಸಮಿತಿ ಸದಸ್ಯ ಜೆ. ಹೆಚ್ ಅಬೂಬಕ್ಕರ್ ಸಿದ್ದೀಕ್, ಉಪಾಧ್ಯಕ್ಷ ಬದ್ರುದ್ದೀನ್ ಕಾಜೂರು,
ಕೆ. ಎಮ್ ಅಬೂಬಕ್ಕರ್, ಪ್ರಮುಖರಾದ ಅಶ್ಫಾಕ್ ಕಾಜೂರು, ಶರೀಫ್ ಕಾಜೂರ್, ಆಸಿಫ್ ಜೆ.ಹೆಚ್, ಇರ್ಷಾದ್ ಕಾಜೂರ್, ಬಿ.ಕೆ ಹಿದಾಯತ್ ಕೃಷ್ಣಾಪುರ, ಉಮರ್‌ಕುಂಞಿ ನಾಡ್ಜೆ ಮೊದಲಾದವರು ಉಪಸ್ಥಿತರಿದ್ದರು.

Related posts

ಕೊಕ್ಕಡ ಜೆಸಿ ಸಾಮಾನ್ಯ ಸಭೆ: ವಾರ್ಷಿಕ ಕ್ರಿಯಾಯೋಜನೆ ಮಂಜೂರಾತಿ

Suddi Udaya

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಶಿಬಾಜೆಯ ಸಂಪ್ರೀತಾ ಎಸ್. ಶೆಟ್ಟಿಗಾರ್‌ ರವರ “ಅಂತರಾಳದ ಧ್ವನಿ” ಕವನ ಸಂಕಲನ ಬಿಡುಗಡೆ

Suddi Udaya

ಕರಾವಳಿ ಜಾನಪದ ಕ್ರೀಡೆ ಕಂಬಳಕ್ಕೆ ಸುಪ್ರೀಂ ಕೋರ್ಟ್ ಅನುಮತಿ ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ :ರಕ್ಷಿತ್ ಶಿವರಾಂ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ

Suddi Udaya

ಗಾಳಿ ಮಳೆಗೆ ಚಲಿಸುತ್ತಿದ್ದವಾಹನ ಮೇಲೆ ಬಿದ್ದ ಮರದ ಗೆಲ್ಲು

Suddi Udaya

ಬದನಾಜೆ ಸ.ಹಿ.ಪ್ರಾ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶಾರದಾ ಸೇವಾ ನಿವೃತ್ತಿ

Suddi Udaya
error: Content is protected !!