22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹಳದಿ ದಿನ ಆಚರಣೆ

ಪಟ್ರಮೆ :ಇಲ್ಲಿಯ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯ ನರ್ಸರಿ ವಿಭಾಗದಿಂದ ಹಳದಿ ದಿನ ಆಚರಿಸಲಾಯಿತು.


ಎಲ್ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳಿಗೆ ಹಳದಿ ಬಣ್ಣದ ಮಹತ್ವ, ಬಳಕೆ ಮತ್ತು ಉಪಯೋಗದ ಬಗ್ಗೆ ಪ್ರಾಯೋಗಿಕ ಜ್ಞಾನ ನೀಡುವುದಕ್ಕಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು.


ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಶೇಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಈ ರೀತಿಯ ಪ್ರಾಯೋಗಿಕವಾಗಿ ಕಾರ್ಯಕ್ರಮಗಳನ್ನು ಮಾಡಿದಾಗ ಬೇಗನೆ ಕಲಿತುಕೊಳ್ಳುತ್ತಾರೆ. ಕೇವಲ ಓದುವುದು ಬರೆಯುವುದು ಮಾತ್ರವಲ್ಲದೆ ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳ ಕಲಿಕೆಗೆ ಸಹಕಾರಿಯಾಗುತ್ತದೆ ಎಂದರು.


ಶಾಲಾ ಆಂಗ್ಲ ಭಾಷಾ ದಿಲೀಪ್ ವಿದ್ಯಾರ್ಥಿಗಳಿಗೆ ಹಳದಿ ಬಣ್ಣದ ಮಹತ್ವವನ್ನು ತಿಳಿಸುವುದರೊಂದಿಗೆ, ಪ್ರಾಮುಖ್ಯತೆ, ಹಾಗೂ ಪ್ರಯೋಜನವನ್ನು ತಿಳಿಸಿದರು. ನರ್ಸರಿ ವಿಭಾಗದ ಮೇಲ್ವಿಚಾರಕಿ ಸ್ವಾತಿ ಕೆ. ವಿ, ಶಿಕ್ಷಕಿ ವನಿತಾ ಸಹ ಶಿಕ್ಷಕರಾದ ಸುಪ್ರೀತಾ ಎ, ಶ್ವೇತ ಕುಮಾರಿ ಎಂ ಪಿ, ಶುಭಲಕ್ಷ್ಮಿ, ರೇಶ್ಮಾ, ಕಲ್ಪನಾ ಚಿಪಳೂಣ್ಕರ್, ಭವ್ಯ ಪಿ.ಡಿ, ಕುಸುಮಾವತಿ ಸಹಕರಿಸಿದರು.

Related posts

ವಾಣಿ ಆಂ.ಮಾ. ಶಾಲೆಯ ಕು. ಶಾನ್ವಿ ಕುಲಾಲ್ ಕರಾಟೆ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಉಜಿರೆ ಅನುಗ್ರಹ ಪ.ಪೂ ಕಾಲೇಜು ಶೇ. 100 ಫಲಿತಾಂಶ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ನೂತನ ಸಭಾಭವನಕ್ಕೆ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರಿಂದ ಶಿಲಾನ್ಯಾಸ

Suddi Udaya

ಎ.26: ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ: 16 ನಿರ್ದೇಶಕ ಸ್ಥಾನಕ್ಕೆ 41 ಮಂದಿ ಅಭ್ಯರ್ಥಿಗಳ ನಡುವೆ ಸ್ಪರ್ಧೆ

Suddi Udaya

ಕೊಕ್ಕಡ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

Suddi Udaya
error: Content is protected !!