23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ: ಹೇರಾಜೆ ಶೇಖರ ಬಂಗೇರ ಮೃತ್ಯು: ಸ್ಕೂಟಿ ಸವಾರೆ ಅನೂಷಾ ಗಂಭೀರ ಗಾಯ

ಬೆಳ್ತಂಗಡಿ: ಇಲ್ಲಿನ ಸಂತೆಕಟ್ಟೆ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಹೇರಾಜೆ ಶೇಖರ‌ ಬಂಗೇರ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ.

ಘಟನೆಯ ವಿವರ: ಶೇಖರ್ ಬಂಗೇರರವರು ‌ಇಂದು ರಾತ್ರಿ ಸಮಡೈನ್ ಹೋಟೇಲ್ ನಿಂದ ಪುಡ್ ಪಾರ್ಸಲ್ ತೆಗೆದುಕೊಂಡು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಸ್ಕೂಟಿ ಬಂದು ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ರಸ್ತೆಗೆ ಎಳೆಯಲ್ಪಟ್ಟು ಶೇಖರ ಬಂಗೇರ ಗಂಭೀರ ಗಾಯಗೊಂಡರು ಕೂಡಲೇ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋದರೂ, ದಾರಿ ಮಧ್ಯೆ ಅವರು ಮೃತಪಟ್ಟರು.

ಸ್ಕೂಟಿ ಸವಾರರು ಕೂಡಾ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಶೇಖರ ಬಂಗೇರ ಅವರು ನಿವೃತ್ತ ವಿಜಯಾ ಬ್ಯಾಂಕ್ ಮೆನೇಜರ್ ಆಗಿದ್ದು,ಲಾಯಿಲ ರಾಘವೇಂದ್ರ ಸ್ವಾಮಿ ಪ್ರತಿಷ್ಠಾನದ ಮಾಜಿ ಅಧ್ಯಕ್ಷರಾಗಿ, ಹಲವಾರು ಸಂಘ- ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇವರು ನಿವೃತ್ತ ಎಸ್.ಪಿ ಪೀತಾಂಬರ ಹೇರಾಜೆಯವರ ಸಹೋದರ.

Related posts

ಮೇಲಂತಬೆಟ್ಟು: ನಡುವಡ್ಕ ನಿವಾಸಿ ಹೊನ್ನಮ್ಮ ನಿಧನ

Suddi Udaya

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಆಕರ್ಷಣೀಯ ಸಖೀ ಮತಗಟ್ಟೆ

Suddi Udaya

ಇಳಂತಿಲ ಗ್ರಾ.ಪಂ. ಗ್ರಾಮ ಸಭೆ

Suddi Udaya

ಸುಮಾರು 700 ವರ್ಷಗಳ ಇತಿಹಾಸ ಹೊಂದಿದ್ದ ತೆಕ್ಕಾರಿನ ಶ್ರೀಗೋಪಾಲಕೃಷ್ಣ ದೇವರಿಗೆ ನೂರೈವತ್ತು ವರ್ಷಗಳ ನಂತರ ಬಾಲಾಲಯದಲ್ಲಿ ಪ್ರಥಮ ಪೂಜೆ

Suddi Udaya

ಸಿ.ಎ. ಇಂಟರ್ ಮೀಡಿಯೆಟ್ ತರಬೇತಿ: ದೇಶಕ್ಕೆ 10ನೇ ರ್‍ಯಾಂಕ್ ಗಳಿಸಿದ ಬಜಿರೆಯ ದೀಪಕ್ ಹೆಗ್ಡೆ

Suddi Udaya
error: Content is protected !!