25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ: ಹೇರಾಜೆ ಶೇಖರ ಬಂಗೇರ ಮೃತ್ಯು: ಸ್ಕೂಟಿ ಸವಾರೆ ಅನೂಷಾ ಗಂಭೀರ ಗಾಯ

ಬೆಳ್ತಂಗಡಿ: ಇಲ್ಲಿನ ಸಂತೆಕಟ್ಟೆ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಹೇರಾಜೆ ಶೇಖರ‌ ಬಂಗೇರ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ.

ಘಟನೆಯ ವಿವರ: ಶೇಖರ್ ಬಂಗೇರರವರು ‌ಇಂದು ರಾತ್ರಿ ಸಮಡೈನ್ ಹೋಟೇಲ್ ನಿಂದ ಪುಡ್ ಪಾರ್ಸಲ್ ತೆಗೆದುಕೊಂಡು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಸ್ಕೂಟಿ ಬಂದು ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ರಸ್ತೆಗೆ ಎಳೆಯಲ್ಪಟ್ಟು ಶೇಖರ ಬಂಗೇರ ಗಂಭೀರ ಗಾಯಗೊಂಡರು ಕೂಡಲೇ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋದರೂ, ದಾರಿ ಮಧ್ಯೆ ಅವರು ಮೃತಪಟ್ಟರು.

ಸ್ಕೂಟಿ ಸವಾರರು ಕೂಡಾ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಶೇಖರ ಬಂಗೇರ ಅವರು ನಿವೃತ್ತ ವಿಜಯಾ ಬ್ಯಾಂಕ್ ಮೆನೇಜರ್ ಆಗಿದ್ದು,ಲಾಯಿಲ ರಾಘವೇಂದ್ರ ಸ್ವಾಮಿ ಪ್ರತಿಷ್ಠಾನದ ಮಾಜಿ ಅಧ್ಯಕ್ಷರಾಗಿ, ಹಲವಾರು ಸಂಘ- ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇವರು ನಿವೃತ್ತ ಎಸ್.ಪಿ ಪೀತಾಂಬರ ಹೇರಾಜೆಯವರ ಸಹೋದರ.

Related posts

ಬೆಳ್ತಂಗಡಿ ವರ್ತಕರ ಸಂಘದಿಂದ ಉಸ್ತುವಾರಿ ಸಚಿವ ಗುಂಡೂರಾವ್ ರವರಿಗೆ ಮನವಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ- ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಸಮಾರಂಭ

Suddi Udaya

ನೀಟ್ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ ಪ್ರಜ್ವಲ್ ಹೆಚ್.ಎಂ. ಗೆ ಎಕ್ಸೆಲ್ ಕಾಲೇಜಿನ ವತಿಯಿಂದ ಭವ್ಯ ಮೆರವಣಿಗೆ ಮೂಲಕ ಗೌರರ್ವಾಪಣೆ

Suddi Udaya

ಪಡಂಗಡಿ ಅಂಗನವಾಡಿ ಕೇಂದ್ರದಲ್ಲಿ “ಪೌಷ್ಟಿಕ ಮತ್ತು ಸಮತೋಲನ ಆಹಾರ” ಮಾಹಿತಿ ಕಾರ್ಯಕ್ರಮ

Suddi Udaya

ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಕಾಯರ್ತಡ್ಕದಲ್ಲಿ ಮಾರಾಕಾಯುಧದಿಂದ ಹಲ್ಲೆ; ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

Suddi Udaya
error: Content is protected !!