22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಲಾಡಿ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ. ನಾಪತ್ತೆ ಸಹೋದರನಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

ಮಡಂತ್ಯಾರು : ಮಾಲಾಡಿ ಗ್ರಾಮದ ವಿದ್ಯಾ ನಗರ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯದರ್ಶಿಯಾಗಿರುವ ಲಕ್ಷ್ಮೀನಾರಾಯಣ ಕೆ (52ವ) ಎಂಬವರು, ನಾಪತ್ತೆಯಾಗಿರುವುದಾಗಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಸದ್ರಿಯವರ ಸಹೋದರ ರಮೇಶ್ ಎಂಬವರು ನೀಡಿದ ದೂರಿನಲ್ಲಿ ಸುಮಾರು 6 ವರ್ಷಗಳಿಂದ ಅಮ್ಟಾಡಿ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿಕೊಂಡಿರುವ. ಲಕ್ಷ್ಮೀನಾರಾಯಣ ಅವರು ಮಾ. 27 ರಂದು ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ಹೋಗಿ ಬರುವುದಾಗಿ ತನ್ನ ಪತ್ನಿಗೆ ತಿಳಿಸಿ ಹೋದವರು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ, ಈ ಬಗ್ಗೆ ವಿಷಯ ತಿಳಿದ ಅಮ್ಟಾಡಿ ಪಂಚಾಯತ್‌ ನಲ್ಲಿ ವಿಚಾರಿಸಿದಾಗ, ಸದ್ರಿಯವರು ಮಧ್ಯಾಹ್ನದವರೆಗೆ ಕರ್ತವ್ಯ ನಿರ್ವಹಿಸಿ ಹೋಗಿರುವುದಾಗಿ ತಿಳಿಸಿರುತ್ತಾರೆ.

ಆದರೆ ಲಕ್ಷ್ಮೀನಾರಾಯಣ ಕೆ ರವರು ಮನೆಗೂ ಬಾರದೇ, ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ23/2024ರಂತೆ ನಾಪತ್ತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಜ.13-14: ರೆಖ್ಯ ಗುಡ್ರಾದಿ ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅಡಿಕೆ ಸಮರ್ಪಣೆ

Suddi Udaya

ಮಡಂತ್ಯಾರು: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಜೇನು ಕೃಷಿ ತರಬೇತಿ ಹಾಗೂ ಭತ್ತದ ಕೃಷಿ ಉತ್ಪಾದನೆ ಬಗ್ಗೆ ಮಾಹಿತಿ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮೂಡುಬಿದಿರೆ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ 35ನೇ ಶಾಖೆ ಉದ್ಘಾಟನೆ

Suddi Udaya

ಎಕ್ಸೆಲ್ ನಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya
error: Content is protected !!