27.8 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5 ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ಸಂಪನ್ನ.

ಬಳಂಜ: ಕಳೆದ 5 ವರ್ಷಗಳ ಹಿಂದೆ ಬಳಂಜದಲ್ಲಿ ಬಿವಿಎಲ್ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಿ 5 ಸೀಸನ್ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿದೆ.

ಬಿಡ್ಡಿಂಗ್ ಮಾದರಿಯ 6 ತಂಡಗಳ ಪೈಕಿ ಪ್ರಗತಿಪರ ಕೃಷಿಕ ವಿಶ್ವನಾಥ ಹೊಳ್ಳ ಮತ್ತು ಯುವ ಉದ್ಯಮಿ ಅನಂತರಾಮ ಹೊಳ್ಳ ಮಾಲಕತ್ವದ ಮಜ್ಜೇನಿಬೈಲು ಬ್ರದರ್ಸ್ ತಂಡ ಸೀಸನ್ 5 ರ ಎಲ್ಲಾ ಪಂದ್ಯಾವಳಿಯಲ್ಲಿ ಪ್ರಥಮ‌ ಸ್ಥಾನ‌ ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿದೆ.

ರಾಕೇಶ್ ಹೆಗ್ಡೆ ಮಾಲಕತ್ವದ ಇಕೋಫ್ರೇಶ್ ಎಂಟರ್ಪ್ರೈಸಸ್, ಸಂತೋಷ್ ಪಿ ಕೋಟ್ಯಾನ್ ಮಾಲಕತ್ವದ ಕೋಟ್ಯಾನ್ ರಾಕರ್ಸ್, ಸಂತೋಷ್ ಕುಮಾರ್ ಮಾಲಕತ್ವದ ಶಿವಗಿರಿ ಕಾಪಿನಡ್ಕ, ಸಚಿನ್ ಶೆಟ್ಟಿ ಮಾಲಕತ್ವದ ಶ್ರೀಮಾತಾ ಅಟೆಕ್ಕರ್ಸ್,ವಿನು ಬಳಂಜ ಮಾಲಕತ್ವದ ದಿಮಿಸೋಲೆ ತಂಡವು ಭಾಗವಹಿಸಿದ್ದವು.

ಚಾಂಪಿಯನ್ ತಂಡದಲ್ಲಿ ಗುರುಪ್ರಸಾದ್ ಹೆಗ್ಡೆ ದರಿಮಾರ್,ಲತೇಶ್ ಪೆರಾಜೆ,ಯಶಸ್ಸ್ ಬಳಂಜ,ನಿಶಾಂತ್ ಹುಂಬೆಜೆ,ಶರಣ್ ಅಟ್ಲಾಜೆ,ಯತೀಶ್ ಶಾರಬೈಲು,ಪ್ರಕಾಶ್ ಶೆಟ್ಟಿ ತಾರ್ದೊಟ್ಟು,ನಿತಿನ್,ಅಭಿ,ಅನ್ವಿತ್,ರಾಹುಲ್ ಇದ್ದರು.

ಬಳಂಜ ವಾಲಿಬಾಲ್ ಕ್ಲಬ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಸೇರಿದಂತೆ ತಂಡದ ಪದಾಧಿಕಾರಿಗಳು, ಆಟಗಾರರು, ವಿವಿಧ ತಂಡದ ಮಾಲಕರು ಚಾಂಪಿಯನ್ ತಂಡವನ್ನು ಅಭಿನಂದಿಸಿದರು.

ಮಜ್ಜೇನಿಬೈಲು ಬ್ರದರ್ಸ್ ತಂಡ ಚಾಂಪಿಯನ್ ಆದ ಹಿನ್ನಲೆಯಲ್ಲಿ ತಂಡದ ಎಲ್ಲಾ ಸದಸ್ಯರನ್ನು ತಂಡದ ಮಾಲಕರಾದ ವಿಶ್ವನಾಥ ಹೊಳ್ಳ,ಅನಂತರಾಮ ಹೊಳ್ಳ ಶಿರ್ಡಿ ಸಾಯಿಬಾಬಾ ಮಂದಿರ ದರ್ಶನ ಯಾತ್ರೆ ಕೈಗೊಂಡಿದ್ದಾರೆ.

Related posts

ಲಯನ್ ಎಂ. ಜಿ. ಶೆಟ್ಟಿಯವರಿಗೆ ಪ್ರತಿಷ್ಠಿತ ಎಮ್.ಜೆ.ಎಫ್ ಗೌರವ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಮೂರನೇ ಕಾದಂಬರಿ “ಅಚ್ಚಣ್ಣ ಭಟ್ರು” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಮುರಳಿ ಬಲಿಪ ವಕೀಲರ ಕಚೇರಿ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

Suddi Udaya

ಮಡಂತ್ಯಾರು: ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆ: ಸ್ಮಯ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಥಮ ಪ್ರಶಸ್ತಿ

Suddi Udaya
error: Content is protected !!