July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5 ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ಸಂಪನ್ನ.

ಬಳಂಜ: ಕಳೆದ 5 ವರ್ಷಗಳ ಹಿಂದೆ ಬಳಂಜದಲ್ಲಿ ಬಿವಿಎಲ್ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಿ 5 ಸೀಸನ್ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿದೆ.

ಬಿಡ್ಡಿಂಗ್ ಮಾದರಿಯ 6 ತಂಡಗಳ ಪೈಕಿ ಪ್ರಗತಿಪರ ಕೃಷಿಕ ವಿಶ್ವನಾಥ ಹೊಳ್ಳ ಮತ್ತು ಯುವ ಉದ್ಯಮಿ ಅನಂತರಾಮ ಹೊಳ್ಳ ಮಾಲಕತ್ವದ ಮಜ್ಜೇನಿಬೈಲು ಬ್ರದರ್ಸ್ ತಂಡ ಸೀಸನ್ 5 ರ ಎಲ್ಲಾ ಪಂದ್ಯಾವಳಿಯಲ್ಲಿ ಪ್ರಥಮ‌ ಸ್ಥಾನ‌ ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿದೆ.

ರಾಕೇಶ್ ಹೆಗ್ಡೆ ಮಾಲಕತ್ವದ ಇಕೋಫ್ರೇಶ್ ಎಂಟರ್ಪ್ರೈಸಸ್, ಸಂತೋಷ್ ಪಿ ಕೋಟ್ಯಾನ್ ಮಾಲಕತ್ವದ ಕೋಟ್ಯಾನ್ ರಾಕರ್ಸ್, ಸಂತೋಷ್ ಕುಮಾರ್ ಮಾಲಕತ್ವದ ಶಿವಗಿರಿ ಕಾಪಿನಡ್ಕ, ಸಚಿನ್ ಶೆಟ್ಟಿ ಮಾಲಕತ್ವದ ಶ್ರೀಮಾತಾ ಅಟೆಕ್ಕರ್ಸ್,ವಿನು ಬಳಂಜ ಮಾಲಕತ್ವದ ದಿಮಿಸೋಲೆ ತಂಡವು ಭಾಗವಹಿಸಿದ್ದವು.

ಚಾಂಪಿಯನ್ ತಂಡದಲ್ಲಿ ಗುರುಪ್ರಸಾದ್ ಹೆಗ್ಡೆ ದರಿಮಾರ್,ಲತೇಶ್ ಪೆರಾಜೆ,ಯಶಸ್ಸ್ ಬಳಂಜ,ನಿಶಾಂತ್ ಹುಂಬೆಜೆ,ಶರಣ್ ಅಟ್ಲಾಜೆ,ಯತೀಶ್ ಶಾರಬೈಲು,ಪ್ರಕಾಶ್ ಶೆಟ್ಟಿ ತಾರ್ದೊಟ್ಟು,ನಿತಿನ್,ಅಭಿ,ಅನ್ವಿತ್,ರಾಹುಲ್ ಇದ್ದರು.

ಬಳಂಜ ವಾಲಿಬಾಲ್ ಕ್ಲಬ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಸೇರಿದಂತೆ ತಂಡದ ಪದಾಧಿಕಾರಿಗಳು, ಆಟಗಾರರು, ವಿವಿಧ ತಂಡದ ಮಾಲಕರು ಚಾಂಪಿಯನ್ ತಂಡವನ್ನು ಅಭಿನಂದಿಸಿದರು.

ಮಜ್ಜೇನಿಬೈಲು ಬ್ರದರ್ಸ್ ತಂಡ ಚಾಂಪಿಯನ್ ಆದ ಹಿನ್ನಲೆಯಲ್ಲಿ ತಂಡದ ಎಲ್ಲಾ ಸದಸ್ಯರನ್ನು ತಂಡದ ಮಾಲಕರಾದ ವಿಶ್ವನಾಥ ಹೊಳ್ಳ,ಅನಂತರಾಮ ಹೊಳ್ಳ ಶಿರ್ಡಿ ಸಾಯಿಬಾಬಾ ಮಂದಿರ ದರ್ಶನ ಯಾತ್ರೆ ಕೈಗೊಂಡಿದ್ದಾರೆ.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಮಹಾರಥೋತ್ಸವ

Suddi Udaya

ಮಚ್ಚಿನ : ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೆ.50 ರಷ್ಟು ಡಿಸ್ಕೌಂಟ್

Suddi Udaya

ಧರ್ಮಸ್ಥಳದಲ್ಲಿ ಸ್ವಾತಿ ರೆಸಿಡೆನ್ಸಿ ಶುಭಾರಂಭ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ವಿದ್ಯಾಸಿರಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಅಂಡಿಂಜೆ ಗ್ರಾ.ಪಂ. ನಿಸರ್ಗ ಸಂಜೀವಿನಿ ಒಕ್ಕೂಟದಿಂದ ವ್ಯಾಪಾರ ಅಭಿವೃದ್ಧಿ ಯೋಜನೆ ತರಬೇತಿ ಕಾರ್ಯಾಗಾರ

Suddi Udaya
error: Content is protected !!