23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಪ್ಲೇಸ್ಮೆಂಟ್ ಸೆಲ್ ಸಹಯೋಗದಲ್ಲಿ “ಲೈಫ್ ಆನ್ ರಿಗ್” ವಿಶೇಷ ಉಪನ್ಯಾಸ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಇಲ್ಲಿನ ವಾಣಿಜ್ಯ ಸಂಘ ಮತ್ತು ಪ್ಲೇಸ್ಮೆಂಟ್ ಸೆಲ್ ಸಹಯೋಗದಲ್ಲಿ “ಲೈಫ್ ಆನ್ ರಿಗ್” ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಗಿತ್ತು .

ಮುಂಬೈನ ಜಾನ್ ಡಿ ಸಿಲ್ವ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಸಮುದ್ರದಲ್ಲಿ ಕಚ್ಚಾ ತೈಲವನ್ನು ತೆಗೆಯುವ ಪ್ರಕ್ರಿಯೆ ಹಾಗೂ ಸದರಿ ಉದ್ಯಮದಲ್ಲಿ ದೊರೆಯುವ ವಿವಿಧ ಉದ್ಯೋಗ ಅವಕಾಶಗಳ ಬಗ್ಗೆ ಸವಿವರವಾಗಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿ ಡಾ. ಸುಬ್ರಹ್ಮಣ್ಯ ಕೆ ಇವರು ವಹಿಸಿದ್ದರು.

ವಿಭಾಗ ಮುಖ್ಯಸ್ಥರಾದ ಪ್ರೊಫೆಸರ್ ಪದ್ಮನಾಭ ಕೆ ಹಾಗೂ ಕಾರ್ಯಕ್ರಮ ಆಯೋಜಕರಾದ ಪ್ರೊಫೆಸರ್ ಸುರೇಶ್ ವಿ ಹಾಗೂ ಆಂತರಿಕ ಗುಣಮಟ್ಟ ಭರವಸ ಕೋಶದ ಸಂಯೋಜಕರಾದ ಡಾ. ಕುಶಲಪ್ಪ ಹಾಗೂ ಸ್ನಾತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ ಏನ್ ಉಪಸ್ಥಿತರಿದ್ದರು.

ಪ್ರೊಫೆಸರ್ ನವೀನ್ ಹಾಗೂ ಪ್ರೊಫೆಸರ್ ರಾಜೇಶ್ವರಿ ಎಚ್ಎಸ್ ಕಾರ್ಯಕ್ರಮವನ್ನು ಸಂಯೋಜಿಸಿದರು. ಕುಮಾರಿ ಸಂಜನಾ ಸ್ವಾಗತಿಸಿ, ವಿಜಯಲಕ್ಷ್ಮಿ ಸಂಪನ್ಮೂಲ ವ್ಯಕ್ತಿಗಳ ಪರಿಚಯ ಮಾಡಿದರು. ಅಬಿಷ ವಂದಿಸಿದರು. ಅಪೇಕ್ಷ ಕಾರ್ಯಕ್ರಮವನ್ನು ನಿರೂಪಿಸಿದರು

Related posts

ಬಳಂಜ: ಇತಿಹಾಸ ಪ್ರಸಿದ್ಧ ದೇವಸ್ಥಾನಕ್ಕೆ ಪ್ರಭಾವಳಿ ಸಮರ್ಪಣೆ

Suddi Udaya

ಬೆಳಾಲು ಶ್ರೀ ಕೃಷ್ಣ ಕ್ಲಿನಿಕ್ ಗೆ ಉಚಿತ ಇಸಿಜಿ ಮೆಷಿನ್ ಹಸ್ತಾಂತರ

Suddi Udaya

ನೆರಿಯದಲ್ಲಿ ಹಿಂದೂ ರುದ್ರಭೂಮಿಗಾಗಿ ಗ್ರಾಮಸ್ಥರ ಪ್ರತಿಭಟನೆ: ಮೃತದೇಹವನ್ನು ಪಂಚಾಯತ್ ಎದುರಿನಲ್ಲಿಟ್ಟು ಪ್ರತಿಭಟನೆಗೆ ಸಿದ್ದತೆ: ಸ್ಥಳಕ್ಕೆ ತಹಶೀಲ್ದಾರರು ಬರಬೇಕು,ಇಂದೇ ಹಿಂದೂ ರುದ್ರಭೂಮಿಗೆ ಸ್ಥಳ ಮಂಜೂರುಗೊಳಿಸಬೇಕೆಂದು ಒತ್ತಾಯ

Suddi Udaya

ಕಲ್ಮಂಜ: ಗರ್ಭಿಣಿ ಮಹಿಳೆ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಯ೯ಕತ೯ರ ಸಭೆ

Suddi Udaya

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya
error: Content is protected !!