July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಪ್ಲೇಸ್ಮೆಂಟ್ ಸೆಲ್ ಸಹಯೋಗದಲ್ಲಿ “ಲೈಫ್ ಆನ್ ರಿಗ್” ವಿಶೇಷ ಉಪನ್ಯಾಸ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಇಲ್ಲಿನ ವಾಣಿಜ್ಯ ಸಂಘ ಮತ್ತು ಪ್ಲೇಸ್ಮೆಂಟ್ ಸೆಲ್ ಸಹಯೋಗದಲ್ಲಿ “ಲೈಫ್ ಆನ್ ರಿಗ್” ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಗಿತ್ತು .

ಮುಂಬೈನ ಜಾನ್ ಡಿ ಸಿಲ್ವ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಸಮುದ್ರದಲ್ಲಿ ಕಚ್ಚಾ ತೈಲವನ್ನು ತೆಗೆಯುವ ಪ್ರಕ್ರಿಯೆ ಹಾಗೂ ಸದರಿ ಉದ್ಯಮದಲ್ಲಿ ದೊರೆಯುವ ವಿವಿಧ ಉದ್ಯೋಗ ಅವಕಾಶಗಳ ಬಗ್ಗೆ ಸವಿವರವಾಗಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿ ಡಾ. ಸುಬ್ರಹ್ಮಣ್ಯ ಕೆ ಇವರು ವಹಿಸಿದ್ದರು.

ವಿಭಾಗ ಮುಖ್ಯಸ್ಥರಾದ ಪ್ರೊಫೆಸರ್ ಪದ್ಮನಾಭ ಕೆ ಹಾಗೂ ಕಾರ್ಯಕ್ರಮ ಆಯೋಜಕರಾದ ಪ್ರೊಫೆಸರ್ ಸುರೇಶ್ ವಿ ಹಾಗೂ ಆಂತರಿಕ ಗುಣಮಟ್ಟ ಭರವಸ ಕೋಶದ ಸಂಯೋಜಕರಾದ ಡಾ. ಕುಶಲಪ್ಪ ಹಾಗೂ ಸ್ನಾತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ ಏನ್ ಉಪಸ್ಥಿತರಿದ್ದರು.

ಪ್ರೊಫೆಸರ್ ನವೀನ್ ಹಾಗೂ ಪ್ರೊಫೆಸರ್ ರಾಜೇಶ್ವರಿ ಎಚ್ಎಸ್ ಕಾರ್ಯಕ್ರಮವನ್ನು ಸಂಯೋಜಿಸಿದರು. ಕುಮಾರಿ ಸಂಜನಾ ಸ್ವಾಗತಿಸಿ, ವಿಜಯಲಕ್ಷ್ಮಿ ಸಂಪನ್ಮೂಲ ವ್ಯಕ್ತಿಗಳ ಪರಿಚಯ ಮಾಡಿದರು. ಅಬಿಷ ವಂದಿಸಿದರು. ಅಪೇಕ್ಷ ಕಾರ್ಯಕ್ರಮವನ್ನು ನಿರೂಪಿಸಿದರು

Related posts

ಶಿರ್ಲಾಲು ನಲ್ಲಿ ಮೂಲ್ಯರ ಯಾನೆ ಕುಲಾಲರ ಸಂಘದಿಂದ ಕೆಸರುಡೊಂಜಿ ದಿನ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಮುಂಡಾಜೆಯಲ್ಲಿ ಕೃಷಿ ತರಬೇತಿ ಕಾರ್ಯಕ್ರಮ

Suddi Udaya

ಪೆರ್ನೆಯ ಯುವಕ ಯತೀಶ್ ಗೌಡ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ ಕುಂಬಾರರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!