ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಪ್ಲೇಸ್ಮೆಂಟ್ ಸೆಲ್ ಸಹಯೋಗದಲ್ಲಿ “ಲೈಫ್ ಆನ್ ರಿಗ್” ವಿಶೇಷ ಉಪನ್ಯಾಸ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಇಲ್ಲಿನ ವಾಣಿಜ್ಯ ಸಂಘ ಮತ್ತು ಪ್ಲೇಸ್ಮೆಂಟ್ ಸೆಲ್ ಸಹಯೋಗದಲ್ಲಿ “ಲೈಫ್ ಆನ್ ರಿಗ್” ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಗಿತ್ತು .

ಮುಂಬೈನ ಜಾನ್ ಡಿ ಸಿಲ್ವ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಸಮುದ್ರದಲ್ಲಿ ಕಚ್ಚಾ ತೈಲವನ್ನು ತೆಗೆಯುವ ಪ್ರಕ್ರಿಯೆ ಹಾಗೂ ಸದರಿ ಉದ್ಯಮದಲ್ಲಿ ದೊರೆಯುವ ವಿವಿಧ ಉದ್ಯೋಗ ಅವಕಾಶಗಳ ಬಗ್ಗೆ ಸವಿವರವಾಗಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿ ಡಾ. ಸುಬ್ರಹ್ಮಣ್ಯ ಕೆ ಇವರು ವಹಿಸಿದ್ದರು.

ವಿಭಾಗ ಮುಖ್ಯಸ್ಥರಾದ ಪ್ರೊಫೆಸರ್ ಪದ್ಮನಾಭ ಕೆ ಹಾಗೂ ಕಾರ್ಯಕ್ರಮ ಆಯೋಜಕರಾದ ಪ್ರೊಫೆಸರ್ ಸುರೇಶ್ ವಿ ಹಾಗೂ ಆಂತರಿಕ ಗುಣಮಟ್ಟ ಭರವಸ ಕೋಶದ ಸಂಯೋಜಕರಾದ ಡಾ. ಕುಶಲಪ್ಪ ಹಾಗೂ ಸ್ನಾತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ ಏನ್ ಉಪಸ್ಥಿತರಿದ್ದರು.

ಪ್ರೊಫೆಸರ್ ನವೀನ್ ಹಾಗೂ ಪ್ರೊಫೆಸರ್ ರಾಜೇಶ್ವರಿ ಎಚ್ಎಸ್ ಕಾರ್ಯಕ್ರಮವನ್ನು ಸಂಯೋಜಿಸಿದರು. ಕುಮಾರಿ ಸಂಜನಾ ಸ್ವಾಗತಿಸಿ, ವಿಜಯಲಕ್ಷ್ಮಿ ಸಂಪನ್ಮೂಲ ವ್ಯಕ್ತಿಗಳ ಪರಿಚಯ ಮಾಡಿದರು. ಅಬಿಷ ವಂದಿಸಿದರು. ಅಪೇಕ್ಷ ಕಾರ್ಯಕ್ರಮವನ್ನು ನಿರೂಪಿಸಿದರು

Related posts

ಬೆಳ್ತಂಗಡಿ ರೋಟರಿ ಕುಟುಂಬ ಸಮ್ಮಿಲನದಲ್ಲಿ ರೋಟರಿ ಕ್ಲಬ್ ಸಾಧನೆಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಶ್ಲಾಘನೆ

Suddi Udaya

ಗೃಹಜ್ಯೋತಿ ಯೋಜನೆ: ಉಳಿದ ಅರ್ಹ ಫಲಾನುಭವಿಗಳು ಶೀಘ್ರವೇ ಅರ್ಜಿ ಸಲ್ಲಿಸಿ : ಬಿ. ಪದ್ಮನಾಭ ಸಾಲ್ಯಾನ್

Suddi Udaya

ಕೊಯ್ಯೂರು ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಕ್ಷೇತ್ರ ಭೇಟಿ

Suddi Udaya

ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ರಕ್ತದಾನ

Suddi Udaya

ದೇವರ ಆಶೀರ್ವಾದ ಕ್ಷೇತ್ರದ ಮೇಲಿರಲಿದೆ. ಭಗವಂತ ನಮ್ಮೊಂದಿಗೆ ಇದ್ದಾರೆ: ಡಾ.ಹೆಗ್ಗಡೆ

Suddi Udaya
error: Content is protected !!