23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

17 ವರ್ಷಗಳಿಂದ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬೆಳ್ತಂಗಡಿ ಸಂತೆಕಟ್ಟೆ ಬಳಿ ಬಂಧನ

ಬೆಳ್ತಂಗಡಿ: ಸುಮಾರು 17 ವರ್ಷಗಳಿಂದ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಂಟ್ವಾಳ ತಾಲೂಕು ಮಂಚಿ ಗ್ರಾಮದ ನಿವಾಸಿಯನ್ನು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕಂಚಿಲ ಮನೆ ಕುಕ್ಕಾಜೆ ನಿವಾಸಿ ಅಬುಸಾಲಿ (41ವ) ಬಂಧಿತ ಆರೋಪಿ.


ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ :189/2007 ಕಲಂ : 504,506,3ಕ್ಕೆ ಸಂಬಂಧಿಸಿದಂತೆ 17ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ಬೆಳ್ತಂಗಡಿಯಲ್ಲಿ ತಲೆಮರೆಸಿ ಕೊಂಡಿದ್ದಾತನನ್ನು ಮಾ.29 ರಂದು, ಬಂಟ್ವಾಳ ನಗರ ಠಾಣಾ ಪೊಲೀಸ್ ಉಪ ನಿರೀಕ್ಷಿಕರಾದ ರಾಮಕೃಷ್ಣ ರವರು ಮತ್ತು ಹೆಚ್ ಸಿ ರಾಜೇಶ್ ಎಸ್, ಹೆಚ್ ಸಿ ಗಣೇಶ್ ಏನ್ ರವರುಗಳ ತಂಡ, ಬೆಳ್ತಂಗಡಿ ತಾಲೂಕಿನ ಸಂತೆಕಟ್ಟೆಯಲ್ಲಿ ದಸ್ತಗಿರಿ ಮಾಡಿ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರು ಪಡಿಸಿರುತ್ತಾರೆ.

Related posts

ಎಸ್.ಡಿ.ಎಂ ಕಾಲೇಜಿನ ರಾಜ್ಯ ಶಾಸ್ತ್ರ ವಿದ್ಯಾರ್ಥಿಗಳಿಂದ ಗ್ರಾಮ ಸ್ವರಾಜ್ ಕಾರ್ಯಕ್ರಮ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳ ಸಂಸತ್ತಿನ ಚುನಾವಣೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಗೌರವ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ

Suddi Udaya

ಪುತ್ತಿಲ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬಂದಾರು: ಮೈರೊಳ್ತಡ್ಕ ವಾರ್ಡ್ ನ ನಿನ್ನಿಕಲ್ಲು- ಪುಯಿಲ ಕಾಂಕ್ರಿಟ್ ರಸ್ತೆ ಉದ್ಘಾಟನೆ

Suddi Udaya
error: Content is protected !!