ತುಮಕೂರು ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ; 7 ದಿನದ ಬಳಿಕ ಮನೆ ತಲುಪಿದ ಮೂವರ ಮೃತದೇಹ

Suddi Udaya

ಬೆಳ್ತಂಗಡಿ: ತುಮಕೂರಿನ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯ ಕುಚ್ಚಂಗಿ ಕೆರೆಯಲ್ಲಿ ನಿಧಿ ಆಸೆಗೆ ಮಾ.22 ರಂದು ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎನ್‌ಎ ಪರೀಕ್ಷೆ ಬಳಿಕ ಇದೀಗ ಮೂವರ ಮೃತದೇಹವನ್ನು ಮನೆಮಂದಿಗೆ 7 ದಿನದ ಬಳಿಕ ಮಾ.28 ರಂದು ಹಸ್ತಾಂತರ ಮಾಡಿದ್ದು, ಮಾ.29 ರಂದು ಶುಕ್ರವಾರ ಬೆಳಗ್ಗೆ ಮನೆಗೆ ತಲುಪಿದೆ.

ಮೂವರ ಮೃತದೇಹ ಮಾ.29 ರಂದು ಬೆಳಗ್ಗೆ ಶಾಹುಲ್ ಹಮೀದ್ ಹಾಗೂ ಇಸಾಕ್ ರವರ ಮೃತದೇಹ ಬೆಳಗಿನ ಜಾವ ಉಜಿರೆ ಮೊಯ್ಯುದ್ದಿನ್ ಜುಮಾ ಮಸೀದಿ ಹಳೆಪೇಟೆಗೆ ತಲುಪಿದೆ ಹಾಗೂ ಸಿದ್ದೀಕ್ ರವರ ಮೃತದೇಹ ಶಿರ್ಲಾಲ್ ಮಸೀದಿಗೆ ತಲುಪಿದೆ.

Leave a Comment

error: Content is protected !!