23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಪಘಾತದಲ್ಲಿ ಮೃತರಾದ ಪ್ರೈಸ್ ಮ್ಯಾಥ್ಯೂ ರವರಿಗೆ ಬೆಳ್ತಂಗಡಿಯಲ್ಲಿ ಅಂತಿಮ ನಮನ: ಅಂತ್ಯಸಂಸ್ಕಾರಕ್ಕಾಗಿ ಕೇರಳದ ಇರಟ್ಟಿಗೆ ಪಾರ್ಥಿವ ಶರೀರ ರವಾನೆ

ಬೆಳ್ತಂಗಡಿ: ಮಾ.29 ರಂದು ಶುಕ್ರವಾರ ಗುರುವಾಯನಕೆರೆ ಶಕ್ತಿ ನಗರದಲ್ಲಿ ಕಾರು ಅಪಘಾತದಲ್ಲಿ ಮೃತಪಟ್ಟ ಪ್ರೈಸ್ ಮ್ಯಾಥ್ಯೂ ಅವರ ಅಂತಿಮ ದರ್ಶನ ಬೆಳ್ತಂಗಡಿ ಕೆಥಡ್ರಲ್ ಮಹಾ ದೇವಾಲಯದಲ್ಲಿ ನಡೆಯಿತು.

ಈ ವೇಳೆ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರ ನೇತೃತ್ವದಲ್ಲಿ ಧರ್ಮಗುರುಗಳ ಬಳಗ ಅಂತಿಮ ಪ್ರಾರ್ಥನಾ ವಿಧಿ ನಡೆಸಿಕೊಟ್ಟರು.
ಬೆಳ್ತಂಗಡಿ ಸದರ್ನ್ ರಬ್ಬರ್ಸ್ ಇದರ ಮಾಲಕ ವಿ.ವಿ.ಮ್ಯಾಥ್ಯೂ ಅವರ ಪುತ್ರರಾಗಿರುವ ಪ್ರೈಸ್ ಮ್ಯಾಥ್ಯೂ ಅವರು ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಆಕಸ್ಮಿಕವಾಗಿ ಕಾರು ನಿಯಂತ್ರಣ ಕಳೆದುಕೊಂಡು ಧರೆಗೆ ಡಿಕ್ಕಿಯಾಗಿ ದಾರುಣವಾಗಿ ಅವರು ಕೊನೆಯುಸಿರೆಳೆದಿದ್ದರು. ಅಪಘಾತದ ಸಂದರ್ಭ ಅವರ ಜೊತೆಗಿದ್ದ ಧರ್ಮಸ್ಥಳದ ಅರುಣ್ ಜೆ ಮತ್ತು ನಿತಿನ್ ಅವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರೈಸ್ ಮ್ಯಾಥ್ಯೂ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಗೊಳಪಡಿಸಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಹಿಸುವ ದಾರಿ ಮಧ್ಯೆ ಅವರು ಅಸುನೀಗಿದ್ದರು.

ಅವರ ಪಾರ್ಥಿವ ಶರೀರವನ್ನು ಮಹಾದೇವಾಲಯಕ್ಕೆ ತಂದ ವೇಳೆ ಅವರ ಬಂಧುಗಳು ಹಾಗೂ ಮಿತ್ರರು ಅಪಾರ ಪ್ರಮಾಣದಲ್ಲಿ ನೆರೆದಿದ್ದರು.

ಅವರ ಅಂತಿಮ ವಿಧಿ ಹಾಗೂ ಸಂಸ್ಕಾರ ಕಾರ್ಯ ಕೇರಳದ ಇರಟ್ಟಿಯಲ್ಲಿ ನಡೆಯಲಿರುವುದರಿಂದ ಅವರ ಮೃತದೇಹವನ್ನು ಕೇರಳಕ್ಕೆ ಕೊಂಡೊಯ್ಯಲಾಯಿತು.

Related posts

ಎಸ್‌ಕೆಎಸ್‌ಎಸ್‌ಎಫ್ ಕಕ್ಕಿಂಜೆ ಕ್ಲಸ್ಟರ್: ಅಧ್ಯಕ್ಷ ಹಫೀಝ್ ಚಿಬಿದ್ರೆ, ಪ್ರ. ಕಾರ್ಯದರ್ಶಿ ಸದಖತುಲ್ಲಾ ದಾರಿಮಿ, ಕೋಶಾಧಿಕಾರಿ ರಫೀಕ್ ಹಾಜಿ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಆರಂಭ

Suddi Udaya

ಗುರುವಾಯನಕೆರೆ: ವಿದ್ವತ್ ಕ್ಲಾಸ್ ಕನೆಕ್ಟ್ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ

Suddi Udaya

ಕೊಕ್ಕಡದ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ನೆರವು

Suddi Udaya
error: Content is protected !!