March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘ ಮತ್ತು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಕ್ರೀಡೆ ಮತ್ತು ಮನೋಲ್ಲಾಸ ಶಿಬಿರ ಆರಂಭವಾಯಿತು. ಶಿಬಿರದ ಉದ್ಘಾಟನೆಯನ್ನು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶೇಖರ ಗೌಡ ಕೊಲ್ಲಿಮಾರ್ ರವರು ನೆರವೇರಿಸಿ ಮಾತನಾಡುತ್ತಾ, ಬೆಳಾಲು ಪ್ರೌಢಶಾಲೆಯಲ್ಲಿ ನಿರಂತರವಾಗಿ ಬೇಸಿಗೆ ಶಿಬಿರವು ಆಯೋಜನೆಗೊಳ್ಳುತ್ತಿದೆ. ಶಿಬಿರದ ಮೂಲಕ ವಿದ್ಯಾರ್ಥಿಗಳು ವಿಶೇಷ ತರಬೇತಿ ಮತ್ತು ಜ್ಞಾನವನ್ನು ಪಡೆದು, ಬದುಕಿನ ಸವಾಲುಗಳನ್ನು ಎದುರಿಸುವ ಆತ್ಮವಿಶ್ವಾಸ ಪಡೆಯಲು ಸಾಧ್ಯ ಎಂದು ಅಭಿಪ್ರಾಯಪಟ್ಚರು. ಅತಿಥಿಗಳಾಗಿ ಆಗಮಿಸಿದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ ಕನಿಕ್ಕಿಲರವರು ಶುಭಕೋರಿದರು.


ಒಂದು ವಾರದ ಶಿಬಿರದಲ್ಲಿ ರಂಗಕಲೆ, ಗಾಯನ, ಕರಕುಶಲ, ಉಜಿರೆ ಶ್ರೀ ಧ ಮ ಕಾಲೇಜು ಭೇಟಿ, ಆರೋಗ್ಯ ಮಾಹಿತಿ, ಕತೆಗಳಲ್ಲಿ ಜೀವನ ಮೌಲ್ಯ, ಬರವಣಿಗೆ ಕಲೆ ಮೊದಲಾದ ವಿಷಯಗಳಲ್ಲಿ ತರಬೇತಿ ನಡೆಯಲಿದೆ. ವಿವಿಧ ಸಂಪನ್ಮೂಲ ವ್ಯಕ್ತಿಗಳು ಆಗಮಿಸಲಿದ್ದಾರೆ.

ಮೊದಲ ದಿನದ ಶಿಬಿರದಲ್ಲಿ ಕರಕುಶಲ ತಯಾರಿಯ ಬಗ್ಗೆ ಚಿತ್ರಕಲಾ ಶಿಕ್ಷಕರಾದ ಉಜಿರೆಯ ಶ್ರೀರಾಮ್ ಮತ್ತು ಶ್ರೀಮತಿ ಕಾದಂಬರಿ ಧರ್ಮಸ್ಥಳ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿಯನ್ನು ನೀಡಿದರು.

ಉದ್ಘಾಟನಾ ಸಮಾರಂಭದಲ್ಲಿ ಶಿಬಿರದ ಸಂಯೋಜಕರಾದ ಕೃಷ್ಣಾನಂದ, ಸುಮನ್ ಯು ಎಸ್ , ಶ್ರೀಮತಿ ಕೋಕಿಲ, ಶ್ರೀಮತಿ ಚಿತ್ರಾರವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಕು. ರಕ್ಷಾ (ಎಂಟನೇ ತರಗತಿ) ಸ್ವಾಗತಿಸಿ, ಕು. ಚಿನ್ಮಯಿ(9ನೇ ತರಗತಿ) ವಂದಿಸಿದರು, ಕು. ಇಂದುಮತಿ(9ನೇ ತರಗತಿ) ಕಾರ್ಯಕ್ರಮ ನಿರೂಪಿಸಿದರು.

Related posts

ಶಿಬಾಜೆ ಯುವಕನಿಗೆ ಜಾತಿನಿಂದನೆ ಕೊಲೆ ಬೆದರಿಕೆ : ಆರೋಪಿಗಳ ಬಂಧನ

Suddi Udaya

ರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ಪುರುಷರ ತಂಡ ಪ್ರಥಮ ಹಾಗೂ ಮಹಿಳೆಯರ ತಂಡ ದ್ವಿತೀಯ

Suddi Udaya

ಮಡಂತ್ಯಾರು: ಬಂಗೇರಕಟ್ಟ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದ ಮಕ್ಕಳ ಬಾಲ ಮೇಳ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಚಿನ್ನೋತ್ಸವ ಪ್ರಾರಂಭ: 20 ಸಾವಿರದ ಡೈಮಂಡ್ ಖರೀದಿಗೆ 5 ಕಾರು ಗೆಲ್ಲುವ ಸುವರ್ಣಾವಕಾಶ

Suddi Udaya

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಉಜಿರೆಯ ಎಸ್‌ಡಿಎಂ ಕಲಾ ಕೇಂದ್ರಕ್ಕೆ ಅಮೇರಿಕಾದ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಭೇಟಿ- ಸಂಸ್ಥೆಗೆ ಒಂದು ಲಕ್ಷ ಧನ ಸಹಾಯ ಹಸ್ತಾಂತರ- ವಿದ್ಯಾರ್ಥಿಗಳ ಪ್ರತಿಭೆ ಮತ್ತು ಪರಿಶ್ರಮಕ್ಕೆ ಮೆಚ್ಚುಗೆ

Suddi Udaya
error: Content is protected !!