ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘ ಮತ್ತು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಕ್ರೀಡೆ ಮತ್ತು ಮನೋಲ್ಲಾಸ ಶಿಬಿರ ಆರಂಭವಾಯಿತು. ಶಿಬಿರದ ಉದ್ಘಾಟನೆಯನ್ನು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶೇಖರ ಗೌಡ ಕೊಲ್ಲಿಮಾರ್ ರವರು ನೆರವೇರಿಸಿ ಮಾತನಾಡುತ್ತಾ, ಬೆಳಾಲು ಪ್ರೌಢಶಾಲೆಯಲ್ಲಿ ನಿರಂತರವಾಗಿ ಬೇಸಿಗೆ ಶಿಬಿರವು ಆಯೋಜನೆಗೊಳ್ಳುತ್ತಿದೆ. ಶಿಬಿರದ ಮೂಲಕ ವಿದ್ಯಾರ್ಥಿಗಳು ವಿಶೇಷ ತರಬೇತಿ ಮತ್ತು ಜ್ಞಾನವನ್ನು ಪಡೆದು, ಬದುಕಿನ ಸವಾಲುಗಳನ್ನು ಎದುರಿಸುವ ಆತ್ಮವಿಶ್ವಾಸ ಪಡೆಯಲು ಸಾಧ್ಯ ಎಂದು ಅಭಿಪ್ರಾಯಪಟ್ಚರು. ಅತಿಥಿಗಳಾಗಿ ಆಗಮಿಸಿದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ ಕನಿಕ್ಕಿಲರವರು ಶುಭಕೋರಿದರು.


ಒಂದು ವಾರದ ಶಿಬಿರದಲ್ಲಿ ರಂಗಕಲೆ, ಗಾಯನ, ಕರಕುಶಲ, ಉಜಿರೆ ಶ್ರೀ ಧ ಮ ಕಾಲೇಜು ಭೇಟಿ, ಆರೋಗ್ಯ ಮಾಹಿತಿ, ಕತೆಗಳಲ್ಲಿ ಜೀವನ ಮೌಲ್ಯ, ಬರವಣಿಗೆ ಕಲೆ ಮೊದಲಾದ ವಿಷಯಗಳಲ್ಲಿ ತರಬೇತಿ ನಡೆಯಲಿದೆ. ವಿವಿಧ ಸಂಪನ್ಮೂಲ ವ್ಯಕ್ತಿಗಳು ಆಗಮಿಸಲಿದ್ದಾರೆ.

ಮೊದಲ ದಿನದ ಶಿಬಿರದಲ್ಲಿ ಕರಕುಶಲ ತಯಾರಿಯ ಬಗ್ಗೆ ಚಿತ್ರಕಲಾ ಶಿಕ್ಷಕರಾದ ಉಜಿರೆಯ ಶ್ರೀರಾಮ್ ಮತ್ತು ಶ್ರೀಮತಿ ಕಾದಂಬರಿ ಧರ್ಮಸ್ಥಳ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿಯನ್ನು ನೀಡಿದರು.

ಉದ್ಘಾಟನಾ ಸಮಾರಂಭದಲ್ಲಿ ಶಿಬಿರದ ಸಂಯೋಜಕರಾದ ಕೃಷ್ಣಾನಂದ, ಸುಮನ್ ಯು ಎಸ್ , ಶ್ರೀಮತಿ ಕೋಕಿಲ, ಶ್ರೀಮತಿ ಚಿತ್ರಾರವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಕು. ರಕ್ಷಾ (ಎಂಟನೇ ತರಗತಿ) ಸ್ವಾಗತಿಸಿ, ಕು. ಚಿನ್ಮಯಿ(9ನೇ ತರಗತಿ) ವಂದಿಸಿದರು, ಕು. ಇಂದುಮತಿ(9ನೇ ತರಗತಿ) ಕಾರ್ಯಕ್ರಮ ನಿರೂಪಿಸಿದರು.

Related posts

ಕೋಲ್ಕತಾ ವೈದ್ಯ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ: ಬೆಳ್ತಂಗಡಿ ತಾಲೂಕಿನಲ್ಲಿ ತುರ್ತು ಸೇವೆ ಹೊರತುಪಡಿಸಿ ಹೊರರೋಗಿ ವಿಭಾಗ ಹಾಗೂ ಇತರ ವೈದ್ಯಕೀಯ ಸೇವೆಗಳು ಸ್ಥಗಿತ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಇಂದು ಮಹಾ ಬ್ರಹ್ಮರಥೋತ್ಸವ

Suddi Udaya

ಮನೆಯ ಪರಿಸರದಲ್ಲಿ ಅಡ್ಡಾಡುತ್ತಿದ್ದ ಬೃಹದಾಕಾರದ ಹೆಬ್ಬಾವನ್ನು ಹಿಡಿದು ಕಾಡಿಗೆ ಬಿಟ್ಟ ನಾಗರಿಕರು

Suddi Udaya

ದಾಮೋದರ ಶೆಟ್ಟಿಅನಾರೋಗ್ಯದಿಂದ ನಿಧನ

Suddi Udaya

ಸುರ್ಯ ದೇವಸ್ಥಾನದ ಆನುವಂಶಿಕ ಆಡಳಿತಮೊಕ್ತೇಸರಾಗಿ ಡಾ. ಸತೀಶ್ಚಂದ್ರ ಸುರ್ಯಗುತ್ತು ನೇಮಕ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!