July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಪಘಾತದಲ್ಲಿ ಮೃತರಾದ ಪ್ರೈಸ್ ಮ್ಯಾಥ್ಯೂ ರವರಿಗೆ ಬೆಳ್ತಂಗಡಿಯಲ್ಲಿ ಅಂತಿಮ ನಮನ: ಅಂತ್ಯಸಂಸ್ಕಾರಕ್ಕಾಗಿ ಕೇರಳದ ಇರಟ್ಟಿಗೆ ಪಾರ್ಥಿವ ಶರೀರ ರವಾನೆ

ಬೆಳ್ತಂಗಡಿ: ಮಾ.29 ರಂದು ಶುಕ್ರವಾರ ಗುರುವಾಯನಕೆರೆ ಶಕ್ತಿ ನಗರದಲ್ಲಿ ಕಾರು ಅಪಘಾತದಲ್ಲಿ ಮೃತಪಟ್ಟ ಪ್ರೈಸ್ ಮ್ಯಾಥ್ಯೂ ಅವರ ಅಂತಿಮ ದರ್ಶನ ಬೆಳ್ತಂಗಡಿ ಕೆಥಡ್ರಲ್ ಮಹಾ ದೇವಾಲಯದಲ್ಲಿ ನಡೆಯಿತು.

ಈ ವೇಳೆ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರ ನೇತೃತ್ವದಲ್ಲಿ ಧರ್ಮಗುರುಗಳ ಬಳಗ ಅಂತಿಮ ಪ್ರಾರ್ಥನಾ ವಿಧಿ ನಡೆಸಿಕೊಟ್ಟರು.
ಬೆಳ್ತಂಗಡಿ ಸದರ್ನ್ ರಬ್ಬರ್ಸ್ ಇದರ ಮಾಲಕ ವಿ.ವಿ.ಮ್ಯಾಥ್ಯೂ ಅವರ ಪುತ್ರರಾಗಿರುವ ಪ್ರೈಸ್ ಮ್ಯಾಥ್ಯೂ ಅವರು ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಆಕಸ್ಮಿಕವಾಗಿ ಕಾರು ನಿಯಂತ್ರಣ ಕಳೆದುಕೊಂಡು ಧರೆಗೆ ಡಿಕ್ಕಿಯಾಗಿ ದಾರುಣವಾಗಿ ಅವರು ಕೊನೆಯುಸಿರೆಳೆದಿದ್ದರು. ಅಪಘಾತದ ಸಂದರ್ಭ ಅವರ ಜೊತೆಗಿದ್ದ ಧರ್ಮಸ್ಥಳದ ಅರುಣ್ ಜೆ ಮತ್ತು ನಿತಿನ್ ಅವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರೈಸ್ ಮ್ಯಾಥ್ಯೂ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಗೊಳಪಡಿಸಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಹಿಸುವ ದಾರಿ ಮಧ್ಯೆ ಅವರು ಅಸುನೀಗಿದ್ದರು.

ಅವರ ಪಾರ್ಥಿವ ಶರೀರವನ್ನು ಮಹಾದೇವಾಲಯಕ್ಕೆ ತಂದ ವೇಳೆ ಅವರ ಬಂಧುಗಳು ಹಾಗೂ ಮಿತ್ರರು ಅಪಾರ ಪ್ರಮಾಣದಲ್ಲಿ ನೆರೆದಿದ್ದರು.

ಅವರ ಅಂತಿಮ ವಿಧಿ ಹಾಗೂ ಸಂಸ್ಕಾರ ಕಾರ್ಯ ಕೇರಳದ ಇರಟ್ಟಿಯಲ್ಲಿ ನಡೆಯಲಿರುವುದರಿಂದ ಅವರ ಮೃತದೇಹವನ್ನು ಕೇರಳಕ್ಕೆ ಕೊಂಡೊಯ್ಯಲಾಯಿತು.

Related posts

ಎ.20: ಸಿಬಿಕೆ ಕಪ್-2025 ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಪಂದ್ಯಾಟ

Suddi Udaya

ಅಳದಂಗಡಿಯ ವಿದುಷಿ ವಿದ್ಯಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಗುರುವಾಯನಕೆರೆ: 7 ಮಂದಿ ಸಾಧಕರಿಗೆ ‘ಎಕ್ಸೆಲ್ ಅಕ್ಷರ ಗೌರವ ಪುರಸ್ಕಾರ’ ಪ್ರದಾನ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿಂಜೆ ರವರು ಸೌತಡ್ಕ ದೇವಸ್ಥಾನಕ್ಕೆ ಭೇಟಿ, ವಿಶೇಷ ಪೂಜೆ

Suddi Udaya

ಫೆ.7-8: ನಾಲ್ಕೂರು ಹುಂಬೆಜೆ ಪಲ್ಕೆಯಲ್ಲಿ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya
error: Content is protected !!