26.9 C
ಪುತ್ತೂರು, ಬೆಳ್ತಂಗಡಿ
April 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಪಘಾತದಲ್ಲಿ ಮೃತರಾದ ಪ್ರೈಸ್ ಮ್ಯಾಥ್ಯೂ ರವರಿಗೆ ಬೆಳ್ತಂಗಡಿಯಲ್ಲಿ ಅಂತಿಮ ನಮನ: ಅಂತ್ಯಸಂಸ್ಕಾರಕ್ಕಾಗಿ ಕೇರಳದ ಇರಟ್ಟಿಗೆ ಪಾರ್ಥಿವ ಶರೀರ ರವಾನೆ

ಬೆಳ್ತಂಗಡಿ: ಮಾ.29 ರಂದು ಶುಕ್ರವಾರ ಗುರುವಾಯನಕೆರೆ ಶಕ್ತಿ ನಗರದಲ್ಲಿ ಕಾರು ಅಪಘಾತದಲ್ಲಿ ಮೃತಪಟ್ಟ ಪ್ರೈಸ್ ಮ್ಯಾಥ್ಯೂ ಅವರ ಅಂತಿಮ ದರ್ಶನ ಬೆಳ್ತಂಗಡಿ ಕೆಥಡ್ರಲ್ ಮಹಾ ದೇವಾಲಯದಲ್ಲಿ ನಡೆಯಿತು.

ಈ ವೇಳೆ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರ ನೇತೃತ್ವದಲ್ಲಿ ಧರ್ಮಗುರುಗಳ ಬಳಗ ಅಂತಿಮ ಪ್ರಾರ್ಥನಾ ವಿಧಿ ನಡೆಸಿಕೊಟ್ಟರು.
ಬೆಳ್ತಂಗಡಿ ಸದರ್ನ್ ರಬ್ಬರ್ಸ್ ಇದರ ಮಾಲಕ ವಿ.ವಿ.ಮ್ಯಾಥ್ಯೂ ಅವರ ಪುತ್ರರಾಗಿರುವ ಪ್ರೈಸ್ ಮ್ಯಾಥ್ಯೂ ಅವರು ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಆಕಸ್ಮಿಕವಾಗಿ ಕಾರು ನಿಯಂತ್ರಣ ಕಳೆದುಕೊಂಡು ಧರೆಗೆ ಡಿಕ್ಕಿಯಾಗಿ ದಾರುಣವಾಗಿ ಅವರು ಕೊನೆಯುಸಿರೆಳೆದಿದ್ದರು. ಅಪಘಾತದ ಸಂದರ್ಭ ಅವರ ಜೊತೆಗಿದ್ದ ಧರ್ಮಸ್ಥಳದ ಅರುಣ್ ಜೆ ಮತ್ತು ನಿತಿನ್ ಅವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರೈಸ್ ಮ್ಯಾಥ್ಯೂ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಗೊಳಪಡಿಸಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಹಿಸುವ ದಾರಿ ಮಧ್ಯೆ ಅವರು ಅಸುನೀಗಿದ್ದರು.

ಅವರ ಪಾರ್ಥಿವ ಶರೀರವನ್ನು ಮಹಾದೇವಾಲಯಕ್ಕೆ ತಂದ ವೇಳೆ ಅವರ ಬಂಧುಗಳು ಹಾಗೂ ಮಿತ್ರರು ಅಪಾರ ಪ್ರಮಾಣದಲ್ಲಿ ನೆರೆದಿದ್ದರು.

ಅವರ ಅಂತಿಮ ವಿಧಿ ಹಾಗೂ ಸಂಸ್ಕಾರ ಕಾರ್ಯ ಕೇರಳದ ಇರಟ್ಟಿಯಲ್ಲಿ ನಡೆಯಲಿರುವುದರಿಂದ ಅವರ ಮೃತದೇಹವನ್ನು ಕೇರಳಕ್ಕೆ ಕೊಂಡೊಯ್ಯಲಾಯಿತು.

Related posts

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,16,990 ಅಂತರದಿಂದ ಭಾರಿ ಮುನ್ನಡೆ

Suddi Udaya

ಮರೋಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಶಿಬಾಜೆ ಕಾಂಗ್ರೆಸ್ ಬೂತ್ ಸಮಿತಿಯ ಅಧ್ಯಕ್ಷ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

Suddi Udaya

ಉರುವಾಲು ಶ್ರೀ ಭಾರತಿ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಎ.19: ಅರಿಕೆಗುಡ್ಡೆ ಶ್ರೀ ವನದುರ್ಗಾ ಸಭಾಭವನ ಉದ್ಘಾಟನೆ

Suddi Udaya
error: Content is protected !!