ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಪಘಾತದಲ್ಲಿ ಮೃತರಾದ ಪ್ರೈಸ್ ಮ್ಯಾಥ್ಯೂ ರವರಿಗೆ ಬೆಳ್ತಂಗಡಿಯಲ್ಲಿ ಅಂತಿಮ ನಮನ: ಅಂತ್ಯಸಂಸ್ಕಾರಕ್ಕಾಗಿ ಕೇರಳದ ಇರಟ್ಟಿಗೆ ಪಾರ್ಥಿವ ಶರೀರ ರವಾನೆ

ಬೆಳ್ತಂಗಡಿ: ಮಾ.29 ರಂದು ಶುಕ್ರವಾರ ಗುರುವಾಯನಕೆರೆ ಶಕ್ತಿ ನಗರದಲ್ಲಿ ಕಾರು ಅಪಘಾತದಲ್ಲಿ ಮೃತಪಟ್ಟ ಪ್ರೈಸ್ ಮ್ಯಾಥ್ಯೂ ಅವರ ಅಂತಿಮ ದರ್ಶನ ಬೆಳ್ತಂಗಡಿ ಕೆಥಡ್ರಲ್ ಮಹಾ ದೇವಾಲಯದಲ್ಲಿ ನಡೆಯಿತು.

ಈ ವೇಳೆ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರ ನೇತೃತ್ವದಲ್ಲಿ ಧರ್ಮಗುರುಗಳ ಬಳಗ ಅಂತಿಮ ಪ್ರಾರ್ಥನಾ ವಿಧಿ ನಡೆಸಿಕೊಟ್ಟರು.
ಬೆಳ್ತಂಗಡಿ ಸದರ್ನ್ ರಬ್ಬರ್ಸ್ ಇದರ ಮಾಲಕ ವಿ.ವಿ.ಮ್ಯಾಥ್ಯೂ ಅವರ ಪುತ್ರರಾಗಿರುವ ಪ್ರೈಸ್ ಮ್ಯಾಥ್ಯೂ ಅವರು ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಆಕಸ್ಮಿಕವಾಗಿ ಕಾರು ನಿಯಂತ್ರಣ ಕಳೆದುಕೊಂಡು ಧರೆಗೆ ಡಿಕ್ಕಿಯಾಗಿ ದಾರುಣವಾಗಿ ಅವರು ಕೊನೆಯುಸಿರೆಳೆದಿದ್ದರು. ಅಪಘಾತದ ಸಂದರ್ಭ ಅವರ ಜೊತೆಗಿದ್ದ ಧರ್ಮಸ್ಥಳದ ಅರುಣ್ ಜೆ ಮತ್ತು ನಿತಿನ್ ಅವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರೈಸ್ ಮ್ಯಾಥ್ಯೂ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಗೊಳಪಡಿಸಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಹಿಸುವ ದಾರಿ ಮಧ್ಯೆ ಅವರು ಅಸುನೀಗಿದ್ದರು.

ಅವರ ಪಾರ್ಥಿವ ಶರೀರವನ್ನು ಮಹಾದೇವಾಲಯಕ್ಕೆ ತಂದ ವೇಳೆ ಅವರ ಬಂಧುಗಳು ಹಾಗೂ ಮಿತ್ರರು ಅಪಾರ ಪ್ರಮಾಣದಲ್ಲಿ ನೆರೆದಿದ್ದರು.

ಅವರ ಅಂತಿಮ ವಿಧಿ ಹಾಗೂ ಸಂಸ್ಕಾರ ಕಾರ್ಯ ಕೇರಳದ ಇರಟ್ಟಿಯಲ್ಲಿ ನಡೆಯಲಿರುವುದರಿಂದ ಅವರ ಮೃತದೇಹವನ್ನು ಕೇರಳಕ್ಕೆ ಕೊಂಡೊಯ್ಯಲಾಯಿತು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ: ದೇವರಿಗೆ ವಿಶೇಷ ಪೂಜೆ ಸಲ್ಲಿಕೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ ಶಾಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ತಂಡದಿಂದ ಕಮ್ಮಟ – ಬೀದಿ ನಾಟಕ ಪ್ರದರ್ಶನ

Suddi Udaya

ಬೆಳ್ತಂಗಡಿ ಎಸ್ ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಪ್ರೌಢಶಾಲಾ ಪ್ರತಿಭಾ ಕಾರಂಜಿಯಲ್ಲಿ ಹಲವು ಪ್ರಶಸ್ತಿಗಳು

Suddi Udaya

ಕಿರಣ್ ಚಂದ್ರ ಪುಷ್ಪಗಿರಿಯವರಿಂದ ಶಿಬಾಜೆ ಅಡ್ಡಹಳ್ಳ ಫ್ರೆಂಡ್ಸ್ ಇದರ ನೂತನ ಲೋಗೋ ಬಿಡುಗಡೆ

Suddi Udaya

ಜಡಿಮಳೆಗೆ ಕೊಯ್ಯೂರು ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತ: ಆತಂಕದಲ್ಲಿ ಕುಟುಂಬ -ಸ್ಥಳಕ್ಕೆ ಗ್ರಾ.ಪಂ ಪಿಡಿಒ ಭೇಟಿ ಪರಿಶೀಲನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya
error: Content is protected !!