23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಪಘಾತದಲ್ಲಿ ಮೃತರಾದ ಪ್ರೈಸ್ ಮ್ಯಾಥ್ಯೂ ರವರಿಗೆ ಬೆಳ್ತಂಗಡಿಯಲ್ಲಿ ಅಂತಿಮ ನಮನ: ಅಂತ್ಯಸಂಸ್ಕಾರಕ್ಕಾಗಿ ಕೇರಳದ ಇರಟ್ಟಿಗೆ ಪಾರ್ಥಿವ ಶರೀರ ರವಾನೆ

ಬೆಳ್ತಂಗಡಿ: ಮಾ.29 ರಂದು ಶುಕ್ರವಾರ ಗುರುವಾಯನಕೆರೆ ಶಕ್ತಿ ನಗರದಲ್ಲಿ ಕಾರು ಅಪಘಾತದಲ್ಲಿ ಮೃತಪಟ್ಟ ಪ್ರೈಸ್ ಮ್ಯಾಥ್ಯೂ ಅವರ ಅಂತಿಮ ದರ್ಶನ ಬೆಳ್ತಂಗಡಿ ಕೆಥಡ್ರಲ್ ಮಹಾ ದೇವಾಲಯದಲ್ಲಿ ನಡೆಯಿತು.

ಈ ವೇಳೆ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರ ನೇತೃತ್ವದಲ್ಲಿ ಧರ್ಮಗುರುಗಳ ಬಳಗ ಅಂತಿಮ ಪ್ರಾರ್ಥನಾ ವಿಧಿ ನಡೆಸಿಕೊಟ್ಟರು.
ಬೆಳ್ತಂಗಡಿ ಸದರ್ನ್ ರಬ್ಬರ್ಸ್ ಇದರ ಮಾಲಕ ವಿ.ವಿ.ಮ್ಯಾಥ್ಯೂ ಅವರ ಪುತ್ರರಾಗಿರುವ ಪ್ರೈಸ್ ಮ್ಯಾಥ್ಯೂ ಅವರು ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಆಕಸ್ಮಿಕವಾಗಿ ಕಾರು ನಿಯಂತ್ರಣ ಕಳೆದುಕೊಂಡು ಧರೆಗೆ ಡಿಕ್ಕಿಯಾಗಿ ದಾರುಣವಾಗಿ ಅವರು ಕೊನೆಯುಸಿರೆಳೆದಿದ್ದರು. ಅಪಘಾತದ ಸಂದರ್ಭ ಅವರ ಜೊತೆಗಿದ್ದ ಧರ್ಮಸ್ಥಳದ ಅರುಣ್ ಜೆ ಮತ್ತು ನಿತಿನ್ ಅವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರೈಸ್ ಮ್ಯಾಥ್ಯೂ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಗೊಳಪಡಿಸಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಹಿಸುವ ದಾರಿ ಮಧ್ಯೆ ಅವರು ಅಸುನೀಗಿದ್ದರು.

ಅವರ ಪಾರ್ಥಿವ ಶರೀರವನ್ನು ಮಹಾದೇವಾಲಯಕ್ಕೆ ತಂದ ವೇಳೆ ಅವರ ಬಂಧುಗಳು ಹಾಗೂ ಮಿತ್ರರು ಅಪಾರ ಪ್ರಮಾಣದಲ್ಲಿ ನೆರೆದಿದ್ದರು.

ಅವರ ಅಂತಿಮ ವಿಧಿ ಹಾಗೂ ಸಂಸ್ಕಾರ ಕಾರ್ಯ ಕೇರಳದ ಇರಟ್ಟಿಯಲ್ಲಿ ನಡೆಯಲಿರುವುದರಿಂದ ಅವರ ಮೃತದೇಹವನ್ನು ಕೇರಳಕ್ಕೆ ಕೊಂಡೊಯ್ಯಲಾಯಿತು.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ : ವಾರೀಸುದಾರರ ಪತ್ತೆಗಾಗಿ ಮನವಿ

Suddi Udaya

ಫೆ 3 -7: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉದ್ಯೋಗ ಖಾತರಿ ಯೋಜನೆಯಡಿ ಮಾನವ ದಿನಗಳನ್ನು ಸೃಜಿಸಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾಮ ಪಂಚಾಯತ್

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

Suddi Udaya
error: Content is protected !!