25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಲ್ಕು ದಿನಗಳ ನಡೆಯುವ ಬೇಸಿಗೆ ಶಿಬಿರಕ್ಕೆ ಮಾ.28 ರಂದು ಚಾಲನೆ ನೀಡಲಾಯಿತು.

ಮೊದಲ ದಿನದ ಬೇಸಿಗೆ ಶಿಬಿರದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಗೌಡ ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಶಾಲಾ ಶಿಕ್ಷಕಿಯರಾದ ಶ್ರೀಮತಿ ದಿವ್ಯಶ್ರೀ ಯವರು ವಿದ್ಯಾರ್ಥಿಗಳಿಗೆ ಭಗವದ್ಗೀತೆಯನ್ನು ಪಠಿಸಲು ತಿಳಿಸಿಕೊಟ್ಟರು. ಕುಮಾರಿ ಲೋಲಾಕ್ಷಿ ಯವರು ಯಕ್ಷಗಾನ ಹಾಗೂ ತುಳು ಲಿಪಿ, ಶ್ರೀಮತಿ ಸ್ವಾತಿ ಯವರು ಭರತನಾಟ್ಯ ಹಾಗೂ ಶ್ರೀಮತಿ ಸಂಧ್ಯಾ ರವರು ಗಣಕಯಂತ್ರ ತರಬೇತಿಯನ್ನು ನೀಡಿದರು. ವಿದ್ಯಾರ್ಥಿಗಳು ಬಹಳ ಉತ್ಸಾಹದಿಂದ ಬೇಸಿಗೆ ಶಿಬಿರದಲ್ಲಿ ಪಾಲ್ಗೊಂಡರು.

ವಿದ್ಯಾರ್ಥಿಗಳಾದ ಕಿರಣ್‌ ಹಾಗೂ ಶ್ರಾವ್ಯ ವಂದಿಸಿದರು. ಶ್ರೀಮತಿ ಹೇಮಾವತಿಯವರು ಕಾರ್ಯಕ್ರಮವನ್ನು ನಿರೂಪಿಸಿದರು

Related posts

ಎ.23: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್‌ನಲ್ಲಿ 15ನೇ ವರ್ಷದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಪೆರಾಲ್ದರಕಟ್ಟೆ ಸ್ವಲಾತ್ ಕಮಿಟಿ ನೂತನ ಆಡಳಿತ ಸಮಿತಿ ರಚನೆ

Suddi Udaya

ತೆಂಕಕಾರಂದೂರು: ತೆಂಗಿನ ಮರ ಬಿದ್ದು ಮನೆಗೆ ಹಾನಿ: ಪ್ರಾಣಾಪಾಯದಿಂದ ಪಾರು

Suddi Udaya

ಮಾ.6 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಹೊಸಂಗಡಿ: ಗಣೇಶ್ ಪೂಜಾರಿ ಕಾರಾಜೆ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಶುಭಾರಂಭ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕಲಾ ಪೋಷಕ ಸುಂದರ ಹೆಗ್ಡೆ ವೇಣೂರು ಇವರಿಗೆ ಸಾಧನಾಶ್ರೀ ಪ್ರಶಸ್ತಿ ಪ್ರದಾನ

Suddi Udaya
error: Content is protected !!