24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್ ‘ ಕಾರ್ಯಕ್ರಮ

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ ಉಜಿರೆಯ ಕಿಂಡರ್ ಗಾರ್ಟನ್ ವಿಭಾಗದಿಂದ ಹೊರಹೋಗುವ ವಿದ್ಯಾರ್ಥಿಗಳಿಂದ ಬುಧವಾರ ‘ಮೈ ನೆಕ್ಸ್ಟ್ ಸ್ಟೆಪ್’ ಎಂಬ ವಿನೂತನ ಕಾರ್ಯಕ್ರಮ ನಡೆಯಿತು. ಕಿಂಡರ್ ಗಾರ್ಟನ್ ಯುಕೆಜಿ ಎ, ಬಿ, ಸಿ ವಿಭಾಗಗಳ ಮಕ್ಕಳಿಂದ ಸಂಯುಕ್ತವಾಗಿ ನಡೆದ ಈ ವೈವಿಧ್ಯಮಯ ಕಾರ್ಯಕ್ರಮದಲ್ಲಿ “ಬ್ಲ್ಯೂ ಜಾಕಲ್” ಎಂಬ ಕಥಾ ಪ್ರಹಸನ ನಡೆಯಿತು. ಅಗಸ್ತ್ಯ ಈ ಕಾರ್ಯಕ್ರಮವನ್ನು ನಿರೂಪಿಸಿದರು.

ಮೈ ಸ್ಕೂಲ್, ಹಣ್ಣುಹಂಪಲುಗಳು, ಮೈ ಫ್ಯಾಮಿಲಿ, ತರಕಾರಿಗಳು, ಮೈ ಕಂಟ್ರಿ, ಪ್ರಾಣಿಗಳು ‌ಈ ವಿಷಯಗಳ ಬಗ್ಗೆ ಫಾರಿಶ್, ಸಾನಿಧ್ಯ, ಧೀಮನ್ ಜೈನ್, ಮನಸ್ವಿನಿ, ಧನ್ವಿತ್, ಸಂಚಿತಾ ಮಾತನಾಡಿದರು.

ದೇಶದ ಮಹಾನ್ ವ್ಯಕ್ತಿಗಳಿಗೆ ಗೌರವ ಸಲ್ಲಿಸುವ “ಚಪ್ಪಾಳೆ”ಎಂಬ ನೃತ್ಯ ನಾಟಕ, ಆಕ್ಷನ್ ಸೋಂಗ್, ‘ಐ ಆ್ಯಮ್ ರೆಡಿ ಟು ಗೋ’ ನೃತ್ಯವನ್ನು ಪ್ರಸ್ತುತ ಪಡಿಸಿದರು.

ಸಭಾ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಮಕ್ಕಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಆಕ್ಯಾ ಜೈನ್, ಶಾನ್ವಿ ಪ್ರಭು, ರಿಯಾನ್ಶಿ, ಸಾನಿಧ್ಯ ರವರು ಪ್ರಾರ್ಥಿಸಿದರು.
ಕೃದಯ್‌ ನವೀನ್ ಸ್ವಾಗತಿಸಿ, ಸಂಚಿತಾ ವಂದಿಸಿದರು.

Related posts

ಬೆಳ್ತಂಗಡಿ ಜೆಸಿ ಸಪ್ತಾಹದಲ್ಲಿ ಡ್ರೀಮ್ ಡೀಲ್ ಗ್ರೂಪ್ ಎಂಡಿ ಮಹಮ್ಮದ್ ಸುಹೈಲ್‌ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಸರ್ಕಲ್ ಇನ್ಸ್‌ ಪೆಕ್ಟರ್ ಆಗಿ ನಾಗೇಶ್ ಕದ್ರಿ ಮರು ನೇಮಕ

Suddi Udaya

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಡಿ.21 :ಕೊಡಿಂಬಾಡಿಯಲ್ಲಿ ಲಲಿತ ಮೆಡಿಕಲ್ ಸ್ಟೋರ್‍ಸ್ ಶುಭಾರಂಭ

Suddi Udaya

ಅಂಡಿಂಜೆ ಗ್ರಾ.ಪಂ ಮಾಜಿ ಅಧ್ಯಕ್ಷ ರಾಘವ ಪುತ್ರನ್ ನಿಧನ

Suddi Udaya

ಬಳಂಜ : ಮುಜ್ಜಿಮೇರು ಮನೆಯ ಒಬ್ಬು ಪೂಜಾರಿ ನಿಧನ

Suddi Udaya
error: Content is protected !!