37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್ ‘ ಕಾರ್ಯಕ್ರಮ

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ ಉಜಿರೆಯ ಕಿಂಡರ್ ಗಾರ್ಟನ್ ವಿಭಾಗದಿಂದ ಹೊರಹೋಗುವ ವಿದ್ಯಾರ್ಥಿಗಳಿಂದ ಬುಧವಾರ ‘ಮೈ ನೆಕ್ಸ್ಟ್ ಸ್ಟೆಪ್’ ಎಂಬ ವಿನೂತನ ಕಾರ್ಯಕ್ರಮ ನಡೆಯಿತು. ಕಿಂಡರ್ ಗಾರ್ಟನ್ ಯುಕೆಜಿ ಎ, ಬಿ, ಸಿ ವಿಭಾಗಗಳ ಮಕ್ಕಳಿಂದ ಸಂಯುಕ್ತವಾಗಿ ನಡೆದ ಈ ವೈವಿಧ್ಯಮಯ ಕಾರ್ಯಕ್ರಮದಲ್ಲಿ “ಬ್ಲ್ಯೂ ಜಾಕಲ್” ಎಂಬ ಕಥಾ ಪ್ರಹಸನ ನಡೆಯಿತು. ಅಗಸ್ತ್ಯ ಈ ಕಾರ್ಯಕ್ರಮವನ್ನು ನಿರೂಪಿಸಿದರು.

ಮೈ ಸ್ಕೂಲ್, ಹಣ್ಣುಹಂಪಲುಗಳು, ಮೈ ಫ್ಯಾಮಿಲಿ, ತರಕಾರಿಗಳು, ಮೈ ಕಂಟ್ರಿ, ಪ್ರಾಣಿಗಳು ‌ಈ ವಿಷಯಗಳ ಬಗ್ಗೆ ಫಾರಿಶ್, ಸಾನಿಧ್ಯ, ಧೀಮನ್ ಜೈನ್, ಮನಸ್ವಿನಿ, ಧನ್ವಿತ್, ಸಂಚಿತಾ ಮಾತನಾಡಿದರು.

ದೇಶದ ಮಹಾನ್ ವ್ಯಕ್ತಿಗಳಿಗೆ ಗೌರವ ಸಲ್ಲಿಸುವ “ಚಪ್ಪಾಳೆ”ಎಂಬ ನೃತ್ಯ ನಾಟಕ, ಆಕ್ಷನ್ ಸೋಂಗ್, ‘ಐ ಆ್ಯಮ್ ರೆಡಿ ಟು ಗೋ’ ನೃತ್ಯವನ್ನು ಪ್ರಸ್ತುತ ಪಡಿಸಿದರು.

ಸಭಾ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಮಕ್ಕಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಆಕ್ಯಾ ಜೈನ್, ಶಾನ್ವಿ ಪ್ರಭು, ರಿಯಾನ್ಶಿ, ಸಾನಿಧ್ಯ ರವರು ಪ್ರಾರ್ಥಿಸಿದರು.
ಕೃದಯ್‌ ನವೀನ್ ಸ್ವಾಗತಿಸಿ, ಸಂಚಿತಾ ವಂದಿಸಿದರು.

Related posts

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಸಮಾರೋಪ ಸಮಾರಂಭ

Suddi Udaya

ಅರಣ್ಯ ಇಲಾಖೆ ಬುಡಕಟ್ಟು ಸಮುದಾಯದ ಜೊತೆಗೆ ಸರ್ಕಾರವನ್ನು ಕೂಡ ವಂಚಿಸುತ್ತಿದೆ : ಹರೀಶ್ ಎಳನೀರ್

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀಯ ಆಜ್ಞಾ- ಅರಿವಿನ ಧ್ಯಾನ ಕಾರ್ಯಕ್ರಮ ಸಂಪನ್ನ

Suddi Udaya

ಬೆಳ್ತಂಗಡಿಯಲ್ಲಿ ಬೈಕ್ ಮತ್ತು ಕಾರು ಡಿಕ್ಕಿ : ಬೈಕ್ ಸವಾರನಿಗೆ ಗಾಯ

Suddi Udaya

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಕುಟುಂಬೋತ್ಸವ

Suddi Udaya
error: Content is protected !!