25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್ ‘ ಕಾರ್ಯಕ್ರಮ

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ ಉಜಿರೆಯ ಕಿಂಡರ್ ಗಾರ್ಟನ್ ವಿಭಾಗದಿಂದ ಹೊರಹೋಗುವ ವಿದ್ಯಾರ್ಥಿಗಳಿಂದ ಬುಧವಾರ ‘ಮೈ ನೆಕ್ಸ್ಟ್ ಸ್ಟೆಪ್’ ಎಂಬ ವಿನೂತನ ಕಾರ್ಯಕ್ರಮ ನಡೆಯಿತು. ಕಿಂಡರ್ ಗಾರ್ಟನ್ ಯುಕೆಜಿ ಎ, ಬಿ, ಸಿ ವಿಭಾಗಗಳ ಮಕ್ಕಳಿಂದ ಸಂಯುಕ್ತವಾಗಿ ನಡೆದ ಈ ವೈವಿಧ್ಯಮಯ ಕಾರ್ಯಕ್ರಮದಲ್ಲಿ “ಬ್ಲ್ಯೂ ಜಾಕಲ್” ಎಂಬ ಕಥಾ ಪ್ರಹಸನ ನಡೆಯಿತು. ಅಗಸ್ತ್ಯ ಈ ಕಾರ್ಯಕ್ರಮವನ್ನು ನಿರೂಪಿಸಿದರು.

ಮೈ ಸ್ಕೂಲ್, ಹಣ್ಣುಹಂಪಲುಗಳು, ಮೈ ಫ್ಯಾಮಿಲಿ, ತರಕಾರಿಗಳು, ಮೈ ಕಂಟ್ರಿ, ಪ್ರಾಣಿಗಳು ‌ಈ ವಿಷಯಗಳ ಬಗ್ಗೆ ಫಾರಿಶ್, ಸಾನಿಧ್ಯ, ಧೀಮನ್ ಜೈನ್, ಮನಸ್ವಿನಿ, ಧನ್ವಿತ್, ಸಂಚಿತಾ ಮಾತನಾಡಿದರು.

ದೇಶದ ಮಹಾನ್ ವ್ಯಕ್ತಿಗಳಿಗೆ ಗೌರವ ಸಲ್ಲಿಸುವ “ಚಪ್ಪಾಳೆ”ಎಂಬ ನೃತ್ಯ ನಾಟಕ, ಆಕ್ಷನ್ ಸೋಂಗ್, ‘ಐ ಆ್ಯಮ್ ರೆಡಿ ಟು ಗೋ’ ನೃತ್ಯವನ್ನು ಪ್ರಸ್ತುತ ಪಡಿಸಿದರು.

ಸಭಾ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಮಕ್ಕಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಆಕ್ಯಾ ಜೈನ್, ಶಾನ್ವಿ ಪ್ರಭು, ರಿಯಾನ್ಶಿ, ಸಾನಿಧ್ಯ ರವರು ಪ್ರಾರ್ಥಿಸಿದರು.
ಕೃದಯ್‌ ನವೀನ್ ಸ್ವಾಗತಿಸಿ, ಸಂಚಿತಾ ವಂದಿಸಿದರು.

Related posts

ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಪ್ರಾಂಶುಪಾಲರು ಡಾ. ಪ್ರಶಾಂತ್ ಶೆಟ್ಟಿ ರವರಿಗೆ ‘ಆಯುಷ್ ಭೂಷಣ’ ಪುರಸ್ಕಾರ

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯ ಆಯ್ಕೆ

Suddi Udaya

ಬಡಗಕಾರಂದೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲ ಚುನಾವಣೆ

Suddi Udaya
error: Content is protected !!