ಕೊಕ್ರಾಡಿ: ಹೇರ್ದಂಡಿ ಬಾಕ್ಯಾರು ಗರಡಿಗೆ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ,

Suddi Udaya

ಕೊಕ್ರಾಡಿ: ಶ್ರೀ ದೈವ ಕೊಡಮಣಿತ್ತಾಯ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ ಹೇರ್ದಂಡಿ ಬಾಕ್ಯಾರು ಕೊಕ್ರಾಡಿ ಇದರ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ ಹಾಗೂ ನೇಮೋತ್ಸವ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಗಂಧ ಪ್ರಸಾದ ಸ್ವೀಕರಿಸಿದರು.

ಕ್ಷೇತ್ರದ ವತಿಯಿಂದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ ಅವರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಜಯಂತ್ ಕೋಟ್ಯಾನ್, ರತ್ನಾಕರ ಬುಣ್ಣನ್, ಅಜಿತ್ ಕುಮಾರ್ ಜೈನ್ ಹಾಗೂ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Comment

error: Content is protected !!