23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘ ಮತ್ತು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಕ್ರೀಡೆ ಮತ್ತು ಮನೋಲ್ಲಾಸ ಶಿಬಿರ ಆರಂಭವಾಯಿತು. ಶಿಬಿರದ ಉದ್ಘಾಟನೆಯನ್ನು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶೇಖರ ಗೌಡ ಕೊಲ್ಲಿಮಾರ್ ರವರು ನೆರವೇರಿಸಿ ಮಾತನಾಡುತ್ತಾ, ಬೆಳಾಲು ಪ್ರೌಢಶಾಲೆಯಲ್ಲಿ ನಿರಂತರವಾಗಿ ಬೇಸಿಗೆ ಶಿಬಿರವು ಆಯೋಜನೆಗೊಳ್ಳುತ್ತಿದೆ. ಶಿಬಿರದ ಮೂಲಕ ವಿದ್ಯಾರ್ಥಿಗಳು ವಿಶೇಷ ತರಬೇತಿ ಮತ್ತು ಜ್ಞಾನವನ್ನು ಪಡೆದು, ಬದುಕಿನ ಸವಾಲುಗಳನ್ನು ಎದುರಿಸುವ ಆತ್ಮವಿಶ್ವಾಸ ಪಡೆಯಲು ಸಾಧ್ಯ ಎಂದು ಅಭಿಪ್ರಾಯಪಟ್ಚರು. ಅತಿಥಿಗಳಾಗಿ ಆಗಮಿಸಿದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ ಕನಿಕ್ಕಿಲರವರು ಶುಭಕೋರಿದರು.


ಒಂದು ವಾರದ ಶಿಬಿರದಲ್ಲಿ ರಂಗಕಲೆ, ಗಾಯನ, ಕರಕುಶಲ, ಉಜಿರೆ ಶ್ರೀ ಧ ಮ ಕಾಲೇಜು ಭೇಟಿ, ಆರೋಗ್ಯ ಮಾಹಿತಿ, ಕತೆಗಳಲ್ಲಿ ಜೀವನ ಮೌಲ್ಯ, ಬರವಣಿಗೆ ಕಲೆ ಮೊದಲಾದ ವಿಷಯಗಳಲ್ಲಿ ತರಬೇತಿ ನಡೆಯಲಿದೆ. ವಿವಿಧ ಸಂಪನ್ಮೂಲ ವ್ಯಕ್ತಿಗಳು ಆಗಮಿಸಲಿದ್ದಾರೆ.

ಮೊದಲ ದಿನದ ಶಿಬಿರದಲ್ಲಿ ಕರಕುಶಲ ತಯಾರಿಯ ಬಗ್ಗೆ ಚಿತ್ರಕಲಾ ಶಿಕ್ಷಕರಾದ ಉಜಿರೆಯ ಶ್ರೀರಾಮ್ ಮತ್ತು ಶ್ರೀಮತಿ ಕಾದಂಬರಿ ಧರ್ಮಸ್ಥಳ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿಯನ್ನು ನೀಡಿದರು.

ಉದ್ಘಾಟನಾ ಸಮಾರಂಭದಲ್ಲಿ ಶಿಬಿರದ ಸಂಯೋಜಕರಾದ ಕೃಷ್ಣಾನಂದ, ಸುಮನ್ ಯು ಎಸ್ , ಶ್ರೀಮತಿ ಕೋಕಿಲ, ಶ್ರೀಮತಿ ಚಿತ್ರಾರವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಕು. ರಕ್ಷಾ (ಎಂಟನೇ ತರಗತಿ) ಸ್ವಾಗತಿಸಿ, ಕು. ಚಿನ್ಮಯಿ(9ನೇ ತರಗತಿ) ವಂದಿಸಿದರು, ಕು. ಇಂದುಮತಿ(9ನೇ ತರಗತಿ) ಕಾರ್ಯಕ್ರಮ ನಿರೂಪಿಸಿದರು.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಜೆ ಇ ಇ ಮೈನ್ಸ್ ನಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಬೆಳ್ತಂಗಡಿ : ಹಳೆಕೋಟೆಯಲ್ಲಿ ಗೋಲ್ಡನ್ ಬ್ಯೂಟಿ ಪಾರ್ಲರ್ & ಮೇಕಪ್ ಅಕಾಡೆಮಿ (ಫ್ಯಾನ್ಸಿ ಮತ್ತು ಟೈಲರಿಂಗ್) ಶುಭಾರಂಭ

Suddi Udaya

ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ ಹಾಗೂ ಉಚಿತ ಮಹಿಳೆಯರ ಕ್ಯಾನ್ಸರ್ ತಪಾಸಣಾ ಶಿಬಿರ

Suddi Udaya

ಮಕ್ಕಾದಲ್ಲಿ ನಿಧನ ಹೊಂದಿದ ಉಮ್ರಾ ಯಾರ್ತಾರ್ಥಿಯ ಅಂತ್ಯಸಂಸ್ಕಾರ‌ಕ್ಕೆ ನೇತೃತ್ವ ವಹಿಸಿದ ಕಿಲ್ಲೂರಿನ ಅಬ್ದುಲ್ ಅಝೀಝ್ ಝುಹುರಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಪರಿಷ್ಕೃತ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಕರ್ನಾಟಕ ದಲಿತ ಚಳುವಳಿ ಸಂಭ್ರಮಾಚರಣಾ ಸಮಿತಿ ಬೆಳ್ತಂಗಡಿ; ಡಿ. 16 : ಬೆಳ್ತಂಗಡಿಯಲ್ಲಿ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮಾಚರಣೆ: ವಿಚಾರ ಸಂಕಿರಣ, ಬೃಹತ್ ಮೆರವಣಿಗೆ, ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮ

Suddi Udaya
error: Content is protected !!