July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘ ಮತ್ತು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಕ್ರೀಡೆ ಮತ್ತು ಮನೋಲ್ಲಾಸ ಶಿಬಿರ ಆರಂಭವಾಯಿತು. ಶಿಬಿರದ ಉದ್ಘಾಟನೆಯನ್ನು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶೇಖರ ಗೌಡ ಕೊಲ್ಲಿಮಾರ್ ರವರು ನೆರವೇರಿಸಿ ಮಾತನಾಡುತ್ತಾ, ಬೆಳಾಲು ಪ್ರೌಢಶಾಲೆಯಲ್ಲಿ ನಿರಂತರವಾಗಿ ಬೇಸಿಗೆ ಶಿಬಿರವು ಆಯೋಜನೆಗೊಳ್ಳುತ್ತಿದೆ. ಶಿಬಿರದ ಮೂಲಕ ವಿದ್ಯಾರ್ಥಿಗಳು ವಿಶೇಷ ತರಬೇತಿ ಮತ್ತು ಜ್ಞಾನವನ್ನು ಪಡೆದು, ಬದುಕಿನ ಸವಾಲುಗಳನ್ನು ಎದುರಿಸುವ ಆತ್ಮವಿಶ್ವಾಸ ಪಡೆಯಲು ಸಾಧ್ಯ ಎಂದು ಅಭಿಪ್ರಾಯಪಟ್ಚರು. ಅತಿಥಿಗಳಾಗಿ ಆಗಮಿಸಿದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ ಕನಿಕ್ಕಿಲರವರು ಶುಭಕೋರಿದರು.


ಒಂದು ವಾರದ ಶಿಬಿರದಲ್ಲಿ ರಂಗಕಲೆ, ಗಾಯನ, ಕರಕುಶಲ, ಉಜಿರೆ ಶ್ರೀ ಧ ಮ ಕಾಲೇಜು ಭೇಟಿ, ಆರೋಗ್ಯ ಮಾಹಿತಿ, ಕತೆಗಳಲ್ಲಿ ಜೀವನ ಮೌಲ್ಯ, ಬರವಣಿಗೆ ಕಲೆ ಮೊದಲಾದ ವಿಷಯಗಳಲ್ಲಿ ತರಬೇತಿ ನಡೆಯಲಿದೆ. ವಿವಿಧ ಸಂಪನ್ಮೂಲ ವ್ಯಕ್ತಿಗಳು ಆಗಮಿಸಲಿದ್ದಾರೆ.

ಮೊದಲ ದಿನದ ಶಿಬಿರದಲ್ಲಿ ಕರಕುಶಲ ತಯಾರಿಯ ಬಗ್ಗೆ ಚಿತ್ರಕಲಾ ಶಿಕ್ಷಕರಾದ ಉಜಿರೆಯ ಶ್ರೀರಾಮ್ ಮತ್ತು ಶ್ರೀಮತಿ ಕಾದಂಬರಿ ಧರ್ಮಸ್ಥಳ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿಯನ್ನು ನೀಡಿದರು.

ಉದ್ಘಾಟನಾ ಸಮಾರಂಭದಲ್ಲಿ ಶಿಬಿರದ ಸಂಯೋಜಕರಾದ ಕೃಷ್ಣಾನಂದ, ಸುಮನ್ ಯು ಎಸ್ , ಶ್ರೀಮತಿ ಕೋಕಿಲ, ಶ್ರೀಮತಿ ಚಿತ್ರಾರವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಕು. ರಕ್ಷಾ (ಎಂಟನೇ ತರಗತಿ) ಸ್ವಾಗತಿಸಿ, ಕು. ಚಿನ್ಮಯಿ(9ನೇ ತರಗತಿ) ವಂದಿಸಿದರು, ಕು. ಇಂದುಮತಿ(9ನೇ ತರಗತಿ) ಕಾರ್ಯಕ್ರಮ ನಿರೂಪಿಸಿದರು.

Related posts

ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ನಾರಾವಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಅ.8-10: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನ ಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಬೆಳ್ತಂಗಡಿ: ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ದತ್ತು ಶಿಬಿರ

Suddi Udaya

ಮೇ 26: ಉಜಿರೆ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ

Suddi Udaya

ಮಡಂತ್ಯಾರು : ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!