September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಭೂಸೇನೆಯಲ್ಲಿ 20ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬಾರ್ಯ ಪಿಲಿಗೂಡು ನಿವಾಸಿ ಹವಾಲ್ದಾರ್ ಜಯಾನಂದ ಪೂಜಾರಿ ಮಾ.31 ರಂದು ಸೇವಾ ನಿವೃತ್ತಿ

ಬೆಳ್ತಂಗಡಿ: ಭಾರತೀಯ ಭೂಸೇನೆಯಲ್ಲಿ ಕಳೆದ 20ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬಾರ್ಯ ಗ್ರಾಮದ ಪಿಲಿಗೂಡು ನಿವಾಸಿ ಹವಾಲ್ದಾರ್ ಜಯಾನಂದ ಪೂಜಾರಿ ಅವರು ಮಾ.31ರಂದು ನಿವೃತ್ತಿಯಾಗಲಿದ್ದಾರೆ

ಜಯಾನಂದ ಪೂಜಾರಿಯವರು 2004ರಿಂದ 2006ರ ತನಕ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಭೂಸೇನೆಯ ಟ್ರೈನಿಂಗ್ ಪಡೆದುಕೊಂಡಿದ್ದಾರೆ. ಬಳಿಕ 3 ವರ್ಷ ಉತ್ತರ ಪ್ರದೇಶದ ಮೀರತ್, 3 ವರ್ಷ 23ರಾಷ್ಟ್ರೀಯ ರೈಫಲ್, 3 ವರ್ಷ ಬೆಂಗಳೂರು, 3 ವರ್ಷ ಉತ್ತರ ಪ್ರದೇಶದ ಆಗ್ರಾ, 2 ವರ್ಷ ಜಮ್ಮು ಕಾಶ್ಮೀರದ ಲೇಹ್ ಲಕ್ ಹಾಗೂ ಪ್ರಸ್ತುತ ಬೆಂಗಳೂರಿನ 515 ಆರ್ಮಿ ಬೇಸ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ 20ವರ್ಷಗಳ ಸೇವಾ ಅವಧಿಯಲ್ಲಿ ಹಲವು ಪದಕಗಳನ್ನೂ ಪಡೆದುಕೊಂಡಿದ್ದಾರೆ. 9 ವರ್ಷಗಳ ಸುದೀರ್ಘ ಸೇವಾ ಪದಕ, ವಿಶೇಷ ಸೇವಾ ಪದಕ(ಆಪರೇಷನ್ ರಹಿನೋ), ಪಶ್ಚಿಮಬಂಗಾಳ, ಅಸ್ಸಾಂ, ಜಮ್ಮು ಕಾಶ್ಮೀರದಲ್ಲಿನ ಸೇವೆಯ ವೇಳೆ ಸೈನ್ಯ ಸೇವಾ ಪದಕ, 75ನೇ ಇಂಡಿಪೆಂಡೆನ್ಸ್ ವಾರ್ಷಿಕೋತ್ಸವ ಪದಕ, 20 ವರ್ಷಗಳ ಸುದೀರ್ಘ ಸೇವೆಗಾಗಿ ಪದಕ, 23 ರಾಷ್ಟ್ರೀಯ ರೈಫಲ್ ಹಾಗೂ ಅಸ್ಸಾಂನ ಗುವಾಹಟಿಯಲ್ಲಿ ಸೇವೆ ವೇಳೆ ಅತ್ಯುತ್ತಮ ಹಾರ್ಡ್ ವರ್ಕರ್ ಪ್ರಶಸ್ತಿ, ಲೇಹ್ ಲಾಕ್‌ನಲ್ಲಿ ಸೇವೆ ವೇಳೆ ಎಕ್ಸಲೆಂಟ್ ಅವಾರ್ಡ್ ಪಡೆದುಕೊಂಡಿದ್ದಾರೆ.

ಇವರು ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಪಿಲಿಗೂಡು ಪೆಲತ್ತಾಜೆ ದಿ.ಜನಾರ್ದನ ಪೂಜಾರಿ ಹಾಗೂ ಅಪ್ಪಿ ದಂಪತಿಯ ಪುತ್ರ. ಪತ್ನಿ ಪವಿತ್ರ, ಪುತ್ರಿಯರಾದ ತನ್ನಿ, ತಸ್ಸಿ,

Related posts

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ “ವಾಕ್-ಇನ್ ವಿದ್ವತ್” – ಎ ಸ್ಟೆಪ್ ಇಂಟು ಸಕ್ಸಸ್” ಕಾರ್ಯಕ್ರಮದ ಲೋಗೋ ಅನಾವರಣ

Suddi Udaya

ಬೆಳ್ತಂಗಡಿ : ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಶಿಬಾಜೆ: ನಾಪತ್ತೆಯಾಗಿದ್ದ ಐಂಗುಡ ನಿವಾಸಿ ವಾಸು ರಾಣ್ಯ ಪತ್ತೆ

Suddi Udaya

ಆಗಷ್ಟ್ 28 : ಸೌಜನ್ಯ ಪ್ರಕರಣದ ತನಿಖೆಗೆ ಒತ್ತಾಯಿಸಿ ಚಲೋ ಬೆಳ್ತಂಗಡಿ ಮಹಾಧರಣಿ

Suddi Udaya

ಉಜಿರೆ ಬೆನಕ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸಾಧನ ಪ್ರಶಸ್ತಿ

Suddi Udaya
error: Content is protected !!