July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಪಘಾತದಲ್ಲಿ ಮೃತರಾದ ಪ್ರೈಸ್ ಮ್ಯಾಥ್ಯೂ ರವರಿಗೆ ಬೆಳ್ತಂಗಡಿಯಲ್ಲಿ ಅಂತಿಮ ನಮನ: ಅಂತ್ಯಸಂಸ್ಕಾರಕ್ಕಾಗಿ ಕೇರಳದ ಇರಟ್ಟಿಗೆ ಪಾರ್ಥಿವ ಶರೀರ ರವಾನೆ

ಬೆಳ್ತಂಗಡಿ: ಮಾ.29 ರಂದು ಶುಕ್ರವಾರ ಗುರುವಾಯನಕೆರೆ ಶಕ್ತಿ ನಗರದಲ್ಲಿ ಕಾರು ಅಪಘಾತದಲ್ಲಿ ಮೃತಪಟ್ಟ ಪ್ರೈಸ್ ಮ್ಯಾಥ್ಯೂ ಅವರ ಅಂತಿಮ ದರ್ಶನ ಬೆಳ್ತಂಗಡಿ ಕೆಥಡ್ರಲ್ ಮಹಾ ದೇವಾಲಯದಲ್ಲಿ ನಡೆಯಿತು.

ಈ ವೇಳೆ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರ ನೇತೃತ್ವದಲ್ಲಿ ಧರ್ಮಗುರುಗಳ ಬಳಗ ಅಂತಿಮ ಪ್ರಾರ್ಥನಾ ವಿಧಿ ನಡೆಸಿಕೊಟ್ಟರು.
ಬೆಳ್ತಂಗಡಿ ಸದರ್ನ್ ರಬ್ಬರ್ಸ್ ಇದರ ಮಾಲಕ ವಿ.ವಿ.ಮ್ಯಾಥ್ಯೂ ಅವರ ಪುತ್ರರಾಗಿರುವ ಪ್ರೈಸ್ ಮ್ಯಾಥ್ಯೂ ಅವರು ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಆಕಸ್ಮಿಕವಾಗಿ ಕಾರು ನಿಯಂತ್ರಣ ಕಳೆದುಕೊಂಡು ಧರೆಗೆ ಡಿಕ್ಕಿಯಾಗಿ ದಾರುಣವಾಗಿ ಅವರು ಕೊನೆಯುಸಿರೆಳೆದಿದ್ದರು. ಅಪಘಾತದ ಸಂದರ್ಭ ಅವರ ಜೊತೆಗಿದ್ದ ಧರ್ಮಸ್ಥಳದ ಅರುಣ್ ಜೆ ಮತ್ತು ನಿತಿನ್ ಅವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರೈಸ್ ಮ್ಯಾಥ್ಯೂ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಗೊಳಪಡಿಸಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಹಿಸುವ ದಾರಿ ಮಧ್ಯೆ ಅವರು ಅಸುನೀಗಿದ್ದರು.

ಅವರ ಪಾರ್ಥಿವ ಶರೀರವನ್ನು ಮಹಾದೇವಾಲಯಕ್ಕೆ ತಂದ ವೇಳೆ ಅವರ ಬಂಧುಗಳು ಹಾಗೂ ಮಿತ್ರರು ಅಪಾರ ಪ್ರಮಾಣದಲ್ಲಿ ನೆರೆದಿದ್ದರು.

ಅವರ ಅಂತಿಮ ವಿಧಿ ಹಾಗೂ ಸಂಸ್ಕಾರ ಕಾರ್ಯ ಕೇರಳದ ಇರಟ್ಟಿಯಲ್ಲಿ ನಡೆಯಲಿರುವುದರಿಂದ ಅವರ ಮೃತದೇಹವನ್ನು ಕೇರಳಕ್ಕೆ ಕೊಂಡೊಯ್ಯಲಾಯಿತು.

Related posts

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಉಜಿರೆ: ‘ಎಸ್.ಡಿ.ಎಂ. ನೆನಪಿನಂಗಳ’ದ ಹದಿನಾರನೇ ಕಂತಿನ ಕಾರ್ಯಕ್ರಮ

Suddi Udaya

ನಾವೂರು ಗ್ರಾಮ ಪಂಚಾಯತ್‌ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಂದಾರು: ಕುಂಟಾಲಪಲ್ಕೆ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ ಪುನರ್ ರಚನೆ

Suddi Udaya

ಉಜಿರೆ ಭಾಸ್ಕರ್ ನಾಯ್ಕರ ಮೇಲೆ ಹಲ್ಲೆ ನಡೆಸಿದ ಆರೋಪ: ಮಹೇಶ್‌ ಶೆಟ್ಟಿ ತಿಮರೋಡಿ ಮತ್ತಿತರರ ಮೇಲೆ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿದ ಕೋರ್ಟು 15 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಸೂಚನೆ

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಶಿರ್ಲಾಲು ಸ.ಉ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!