ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಲ್ಕು ದಿನಗಳ ನಡೆಯುವ ಬೇಸಿಗೆ ಶಿಬಿರಕ್ಕೆ ಮಾ.28 ರಂದು ಚಾಲನೆ ನೀಡಲಾಯಿತು.

ಮೊದಲ ದಿನದ ಬೇಸಿಗೆ ಶಿಬಿರದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಗೌಡ ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಶಾಲಾ ಶಿಕ್ಷಕಿಯರಾದ ಶ್ರೀಮತಿ ದಿವ್ಯಶ್ರೀ ಯವರು ವಿದ್ಯಾರ್ಥಿಗಳಿಗೆ ಭಗವದ್ಗೀತೆಯನ್ನು ಪಠಿಸಲು ತಿಳಿಸಿಕೊಟ್ಟರು. ಕುಮಾರಿ ಲೋಲಾಕ್ಷಿ ಯವರು ಯಕ್ಷಗಾನ ಹಾಗೂ ತುಳು ಲಿಪಿ, ಶ್ರೀಮತಿ ಸ್ವಾತಿ ಯವರು ಭರತನಾಟ್ಯ ಹಾಗೂ ಶ್ರೀಮತಿ ಸಂಧ್ಯಾ ರವರು ಗಣಕಯಂತ್ರ ತರಬೇತಿಯನ್ನು ನೀಡಿದರು. ವಿದ್ಯಾರ್ಥಿಗಳು ಬಹಳ ಉತ್ಸಾಹದಿಂದ ಬೇಸಿಗೆ ಶಿಬಿರದಲ್ಲಿ ಪಾಲ್ಗೊಂಡರು.

ವಿದ್ಯಾರ್ಥಿಗಳಾದ ಕಿರಣ್‌ ಹಾಗೂ ಶ್ರಾವ್ಯ ವಂದಿಸಿದರು. ಶ್ರೀಮತಿ ಹೇಮಾವತಿಯವರು ಕಾರ್ಯಕ್ರಮವನ್ನು ನಿರೂಪಿಸಿದರು

Leave a Comment

error: Content is protected !!