September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್ ‘ ಕಾರ್ಯಕ್ರಮ

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ ಉಜಿರೆಯ ಕಿಂಡರ್ ಗಾರ್ಟನ್ ವಿಭಾಗದಿಂದ ಹೊರಹೋಗುವ ವಿದ್ಯಾರ್ಥಿಗಳಿಂದ ಬುಧವಾರ ‘ಮೈ ನೆಕ್ಸ್ಟ್ ಸ್ಟೆಪ್’ ಎಂಬ ವಿನೂತನ ಕಾರ್ಯಕ್ರಮ ನಡೆಯಿತು. ಕಿಂಡರ್ ಗಾರ್ಟನ್ ಯುಕೆಜಿ ಎ, ಬಿ, ಸಿ ವಿಭಾಗಗಳ ಮಕ್ಕಳಿಂದ ಸಂಯುಕ್ತವಾಗಿ ನಡೆದ ಈ ವೈವಿಧ್ಯಮಯ ಕಾರ್ಯಕ್ರಮದಲ್ಲಿ “ಬ್ಲ್ಯೂ ಜಾಕಲ್” ಎಂಬ ಕಥಾ ಪ್ರಹಸನ ನಡೆಯಿತು. ಅಗಸ್ತ್ಯ ಈ ಕಾರ್ಯಕ್ರಮವನ್ನು ನಿರೂಪಿಸಿದರು.

ಮೈ ಸ್ಕೂಲ್, ಹಣ್ಣುಹಂಪಲುಗಳು, ಮೈ ಫ್ಯಾಮಿಲಿ, ತರಕಾರಿಗಳು, ಮೈ ಕಂಟ್ರಿ, ಪ್ರಾಣಿಗಳು ‌ಈ ವಿಷಯಗಳ ಬಗ್ಗೆ ಫಾರಿಶ್, ಸಾನಿಧ್ಯ, ಧೀಮನ್ ಜೈನ್, ಮನಸ್ವಿನಿ, ಧನ್ವಿತ್, ಸಂಚಿತಾ ಮಾತನಾಡಿದರು.

ದೇಶದ ಮಹಾನ್ ವ್ಯಕ್ತಿಗಳಿಗೆ ಗೌರವ ಸಲ್ಲಿಸುವ “ಚಪ್ಪಾಳೆ”ಎಂಬ ನೃತ್ಯ ನಾಟಕ, ಆಕ್ಷನ್ ಸೋಂಗ್, ‘ಐ ಆ್ಯಮ್ ರೆಡಿ ಟು ಗೋ’ ನೃತ್ಯವನ್ನು ಪ್ರಸ್ತುತ ಪಡಿಸಿದರು.

ಸಭಾ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಮಕ್ಕಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಆಕ್ಯಾ ಜೈನ್, ಶಾನ್ವಿ ಪ್ರಭು, ರಿಯಾನ್ಶಿ, ಸಾನಿಧ್ಯ ರವರು ಪ್ರಾರ್ಥಿಸಿದರು.
ಕೃದಯ್‌ ನವೀನ್ ಸ್ವಾಗತಿಸಿ, ಸಂಚಿತಾ ವಂದಿಸಿದರು.

Related posts

ಭವಿಷ್ಯದ ಚಿತ್ರರಂಗದ ಭರವಸೆಯ ಕಲಾವಿದ ರಾಜ್ ಚರಣ್ ಬ್ರಹ್ಮಾವರ್

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕಳೆಂಜ: ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ವಿ.ಪ. ಸದಸ್ಯ ಐವನ್ ಡಿಸೋಜ ರವರಿಗೆ ಮನವಿ

Suddi Udaya

ಶಿಶಿಲ ಗ್ರಾ.ಪಂ. ಅಧ್ಯಕ್ಷರಾಗಿ ಸುಧೀನ್, ಉಪಾಧ್ಯಕ್ಷರಾಗಿ ಯತೀಶ್ ಆಯ್ಕೆ

Suddi Udaya

ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಸ್ತಬ್ಧಚಿತ್ರಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಬಹುಮಾನ

Suddi Udaya

ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಅಭಿವಂದನೆ

Suddi Udaya
error: Content is protected !!