30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘ ಮತ್ತು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಕ್ರೀಡೆ ಮತ್ತು ಮನೋಲ್ಲಾಸ ಶಿಬಿರ ಆರಂಭವಾಯಿತು. ಶಿಬಿರದ ಉದ್ಘಾಟನೆಯನ್ನು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶೇಖರ ಗೌಡ ಕೊಲ್ಲಿಮಾರ್ ರವರು ನೆರವೇರಿಸಿ ಮಾತನಾಡುತ್ತಾ, ಬೆಳಾಲು ಪ್ರೌಢಶಾಲೆಯಲ್ಲಿ ನಿರಂತರವಾಗಿ ಬೇಸಿಗೆ ಶಿಬಿರವು ಆಯೋಜನೆಗೊಳ್ಳುತ್ತಿದೆ. ಶಿಬಿರದ ಮೂಲಕ ವಿದ್ಯಾರ್ಥಿಗಳು ವಿಶೇಷ ತರಬೇತಿ ಮತ್ತು ಜ್ಞಾನವನ್ನು ಪಡೆದು, ಬದುಕಿನ ಸವಾಲುಗಳನ್ನು ಎದುರಿಸುವ ಆತ್ಮವಿಶ್ವಾಸ ಪಡೆಯಲು ಸಾಧ್ಯ ಎಂದು ಅಭಿಪ್ರಾಯಪಟ್ಚರು. ಅತಿಥಿಗಳಾಗಿ ಆಗಮಿಸಿದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ ಕನಿಕ್ಕಿಲರವರು ಶುಭಕೋರಿದರು.


ಒಂದು ವಾರದ ಶಿಬಿರದಲ್ಲಿ ರಂಗಕಲೆ, ಗಾಯನ, ಕರಕುಶಲ, ಉಜಿರೆ ಶ್ರೀ ಧ ಮ ಕಾಲೇಜು ಭೇಟಿ, ಆರೋಗ್ಯ ಮಾಹಿತಿ, ಕತೆಗಳಲ್ಲಿ ಜೀವನ ಮೌಲ್ಯ, ಬರವಣಿಗೆ ಕಲೆ ಮೊದಲಾದ ವಿಷಯಗಳಲ್ಲಿ ತರಬೇತಿ ನಡೆಯಲಿದೆ. ವಿವಿಧ ಸಂಪನ್ಮೂಲ ವ್ಯಕ್ತಿಗಳು ಆಗಮಿಸಲಿದ್ದಾರೆ.

ಮೊದಲ ದಿನದ ಶಿಬಿರದಲ್ಲಿ ಕರಕುಶಲ ತಯಾರಿಯ ಬಗ್ಗೆ ಚಿತ್ರಕಲಾ ಶಿಕ್ಷಕರಾದ ಉಜಿರೆಯ ಶ್ರೀರಾಮ್ ಮತ್ತು ಶ್ರೀಮತಿ ಕಾದಂಬರಿ ಧರ್ಮಸ್ಥಳ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿಯನ್ನು ನೀಡಿದರು.

ಉದ್ಘಾಟನಾ ಸಮಾರಂಭದಲ್ಲಿ ಶಿಬಿರದ ಸಂಯೋಜಕರಾದ ಕೃಷ್ಣಾನಂದ, ಸುಮನ್ ಯು ಎಸ್ , ಶ್ರೀಮತಿ ಕೋಕಿಲ, ಶ್ರೀಮತಿ ಚಿತ್ರಾರವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಕು. ರಕ್ಷಾ (ಎಂಟನೇ ತರಗತಿ) ಸ್ವಾಗತಿಸಿ, ಕು. ಚಿನ್ಮಯಿ(9ನೇ ತರಗತಿ) ವಂದಿಸಿದರು, ಕು. ಇಂದುಮತಿ(9ನೇ ತರಗತಿ) ಕಾರ್ಯಕ್ರಮ ನಿರೂಪಿಸಿದರು.

Related posts

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ಧರ್ಮಸ್ಥಳ: ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಕುಟುಂಬಸ್ಥರೊಂದಿಗೆ ಮತದಾನ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ಅಧ್ಯಕ್ಷರಾಗಿ ವಸಂತಿ ಲಕ್ಷ್ಮಣ್, ಕಾರ್ಯದರ್ಶಿಯಾಗಿ ಸುಮಲತಾ

Suddi Udaya

ಹಣ ತೆಗೆಯಲು ಅಪರಿಚಿತನಿಗೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ ವ್ಯಕ್ತಿ ಎಟಿಎಂ ಕಾರ್ಡ್ ಬದಲಾಯಿಸಿ ನೀಡಿದ ಅಪರಿಚಿತ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ. ತೆಗೆದು ವಂಚನೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಗೀತೆ ಜತೆ ಸಾಹಿತ್ಯ ಸಾಂಗತ್ಯ

Suddi Udaya
error: Content is protected !!