July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘ ಮತ್ತು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಕ್ರೀಡೆ ಮತ್ತು ಮನೋಲ್ಲಾಸ ಶಿಬಿರ ಆರಂಭವಾಯಿತು. ಶಿಬಿರದ ಉದ್ಘಾಟನೆಯನ್ನು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶೇಖರ ಗೌಡ ಕೊಲ್ಲಿಮಾರ್ ರವರು ನೆರವೇರಿಸಿ ಮಾತನಾಡುತ್ತಾ, ಬೆಳಾಲು ಪ್ರೌಢಶಾಲೆಯಲ್ಲಿ ನಿರಂತರವಾಗಿ ಬೇಸಿಗೆ ಶಿಬಿರವು ಆಯೋಜನೆಗೊಳ್ಳುತ್ತಿದೆ. ಶಿಬಿರದ ಮೂಲಕ ವಿದ್ಯಾರ್ಥಿಗಳು ವಿಶೇಷ ತರಬೇತಿ ಮತ್ತು ಜ್ಞಾನವನ್ನು ಪಡೆದು, ಬದುಕಿನ ಸವಾಲುಗಳನ್ನು ಎದುರಿಸುವ ಆತ್ಮವಿಶ್ವಾಸ ಪಡೆಯಲು ಸಾಧ್ಯ ಎಂದು ಅಭಿಪ್ರಾಯಪಟ್ಚರು. ಅತಿಥಿಗಳಾಗಿ ಆಗಮಿಸಿದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ ಕನಿಕ್ಕಿಲರವರು ಶುಭಕೋರಿದರು.


ಒಂದು ವಾರದ ಶಿಬಿರದಲ್ಲಿ ರಂಗಕಲೆ, ಗಾಯನ, ಕರಕುಶಲ, ಉಜಿರೆ ಶ್ರೀ ಧ ಮ ಕಾಲೇಜು ಭೇಟಿ, ಆರೋಗ್ಯ ಮಾಹಿತಿ, ಕತೆಗಳಲ್ಲಿ ಜೀವನ ಮೌಲ್ಯ, ಬರವಣಿಗೆ ಕಲೆ ಮೊದಲಾದ ವಿಷಯಗಳಲ್ಲಿ ತರಬೇತಿ ನಡೆಯಲಿದೆ. ವಿವಿಧ ಸಂಪನ್ಮೂಲ ವ್ಯಕ್ತಿಗಳು ಆಗಮಿಸಲಿದ್ದಾರೆ.

ಮೊದಲ ದಿನದ ಶಿಬಿರದಲ್ಲಿ ಕರಕುಶಲ ತಯಾರಿಯ ಬಗ್ಗೆ ಚಿತ್ರಕಲಾ ಶಿಕ್ಷಕರಾದ ಉಜಿರೆಯ ಶ್ರೀರಾಮ್ ಮತ್ತು ಶ್ರೀಮತಿ ಕಾದಂಬರಿ ಧರ್ಮಸ್ಥಳ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿಯನ್ನು ನೀಡಿದರು.

ಉದ್ಘಾಟನಾ ಸಮಾರಂಭದಲ್ಲಿ ಶಿಬಿರದ ಸಂಯೋಜಕರಾದ ಕೃಷ್ಣಾನಂದ, ಸುಮನ್ ಯು ಎಸ್ , ಶ್ರೀಮತಿ ಕೋಕಿಲ, ಶ್ರೀಮತಿ ಚಿತ್ರಾರವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಕು. ರಕ್ಷಾ (ಎಂಟನೇ ತರಗತಿ) ಸ್ವಾಗತಿಸಿ, ಕು. ಚಿನ್ಮಯಿ(9ನೇ ತರಗತಿ) ವಂದಿಸಿದರು, ಕು. ಇಂದುಮತಿ(9ನೇ ತರಗತಿ) ಕಾರ್ಯಕ್ರಮ ನಿರೂಪಿಸಿದರು.

Related posts

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಟರ್ಮ್ ಇನ್ಶೂರೆನ್ಸ್ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ರೂರಲ್ ಐಟಿ ಕ್ವಿಜ್ ಸ್ಪರ್ಧೆ: ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ಚಾರ್ಮಾಡಿ ಬೂತ್ ಸಂಖ್ಯೆ 21ರಲ್ಲಿ ಕೈ ಕೊಟ್ಟ ಮತ ಯಂತ್ರ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ 8 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 5 ಅಭ್ಯರ್ಥಿಗಳು ಅವಿರೋಧ ಆಯ್ಕೆ

Suddi Udaya

ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ, ತಾಲೂಕು ಮಹಿಳಾ ಬಂಟರ ವಿಭಾಗ ಹಾಗೂ ತಾಲೂಕು ಯುವ ಬಂಟರ ವಿಭಾಗ ನೇತೃತ್ವ ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya
error: Content is protected !!