23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಭೂಸೇನೆಯಲ್ಲಿ 20ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬಾರ್ಯ ಪಿಲಿಗೂಡು ನಿವಾಸಿ ಹವಾಲ್ದಾರ್ ಜಯಾನಂದ ಪೂಜಾರಿ ಮಾ.31 ರಂದು ಸೇವಾ ನಿವೃತ್ತಿ

ಬೆಳ್ತಂಗಡಿ: ಭಾರತೀಯ ಭೂಸೇನೆಯಲ್ಲಿ ಕಳೆದ 20ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬಾರ್ಯ ಗ್ರಾಮದ ಪಿಲಿಗೂಡು ನಿವಾಸಿ ಹವಾಲ್ದಾರ್ ಜಯಾನಂದ ಪೂಜಾರಿ ಅವರು ಮಾ.31ರಂದು ನಿವೃತ್ತಿಯಾಗಲಿದ್ದಾರೆ

ಜಯಾನಂದ ಪೂಜಾರಿಯವರು 2004ರಿಂದ 2006ರ ತನಕ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಭೂಸೇನೆಯ ಟ್ರೈನಿಂಗ್ ಪಡೆದುಕೊಂಡಿದ್ದಾರೆ. ಬಳಿಕ 3 ವರ್ಷ ಉತ್ತರ ಪ್ರದೇಶದ ಮೀರತ್, 3 ವರ್ಷ 23ರಾಷ್ಟ್ರೀಯ ರೈಫಲ್, 3 ವರ್ಷ ಬೆಂಗಳೂರು, 3 ವರ್ಷ ಉತ್ತರ ಪ್ರದೇಶದ ಆಗ್ರಾ, 2 ವರ್ಷ ಜಮ್ಮು ಕಾಶ್ಮೀರದ ಲೇಹ್ ಲಕ್ ಹಾಗೂ ಪ್ರಸ್ತುತ ಬೆಂಗಳೂರಿನ 515 ಆರ್ಮಿ ಬೇಸ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ 20ವರ್ಷಗಳ ಸೇವಾ ಅವಧಿಯಲ್ಲಿ ಹಲವು ಪದಕಗಳನ್ನೂ ಪಡೆದುಕೊಂಡಿದ್ದಾರೆ. 9 ವರ್ಷಗಳ ಸುದೀರ್ಘ ಸೇವಾ ಪದಕ, ವಿಶೇಷ ಸೇವಾ ಪದಕ(ಆಪರೇಷನ್ ರಹಿನೋ), ಪಶ್ಚಿಮಬಂಗಾಳ, ಅಸ್ಸಾಂ, ಜಮ್ಮು ಕಾಶ್ಮೀರದಲ್ಲಿನ ಸೇವೆಯ ವೇಳೆ ಸೈನ್ಯ ಸೇವಾ ಪದಕ, 75ನೇ ಇಂಡಿಪೆಂಡೆನ್ಸ್ ವಾರ್ಷಿಕೋತ್ಸವ ಪದಕ, 20 ವರ್ಷಗಳ ಸುದೀರ್ಘ ಸೇವೆಗಾಗಿ ಪದಕ, 23 ರಾಷ್ಟ್ರೀಯ ರೈಫಲ್ ಹಾಗೂ ಅಸ್ಸಾಂನ ಗುವಾಹಟಿಯಲ್ಲಿ ಸೇವೆ ವೇಳೆ ಅತ್ಯುತ್ತಮ ಹಾರ್ಡ್ ವರ್ಕರ್ ಪ್ರಶಸ್ತಿ, ಲೇಹ್ ಲಾಕ್‌ನಲ್ಲಿ ಸೇವೆ ವೇಳೆ ಎಕ್ಸಲೆಂಟ್ ಅವಾರ್ಡ್ ಪಡೆದುಕೊಂಡಿದ್ದಾರೆ.

ಇವರು ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಪಿಲಿಗೂಡು ಪೆಲತ್ತಾಜೆ ದಿ.ಜನಾರ್ದನ ಪೂಜಾರಿ ಹಾಗೂ ಅಪ್ಪಿ ದಂಪತಿಯ ಪುತ್ರ. ಪತ್ನಿ ಪವಿತ್ರ, ಪುತ್ರಿಯರಾದ ತನ್ನಿ, ತಸ್ಸಿ,

Related posts

ಸರ್ವೋದಯ ಪಕ್ಷದಿಂದ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು :ಆದಿತ್ಯ ನಾರಾಯಣ್

Suddi Udaya

ಗುಡ್ ಫ್ಯೂಚರ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ, ವಾರ್ಷಿಕ ಕ್ರೀಡಾಕೂಟ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಪುತ್ತೂರಿನ ನೂತನ ಸಹಾಯಕ ಕಮಿಷನರ್ ಆಗಿ ಸ್ಟೆಲ್ಲಾ ವರ್ಗೀಸ್ ನಿಯುಕ್ತಿ

Suddi Udaya

ಮೇ 21: ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಮಾನ್ಸೂನ್ ಸೇಲ್ : ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್

Suddi Udaya

ಕಾಶಿಪಟ್ಣ ಕೇಳ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವ ಸಮಾರಂಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ ಕಾಶಿಪಟ್ಣರವರಿಗೆ ಸನ್ಮಾನ

Suddi Udaya

ಕರ್ನಾಟಕ ಮಿನಿ ಕ್ರೀಡಾಕೂಟ ಅಥ್ಲೆಟಿಕ್ಸ್ ಸ್ಪರ್ಧೆ : 100 ಮೀ. ಓಟದಲ್ಲಿ ಚಿನ್ನ ಗೆದ್ದ ಅದ್ವಿಕಾ ಕೆಪಿ

Suddi Udaya
error: Content is protected !!