July 24, 2026
ವರದಿ

ಉಜಿರೆ : ಶ್ರೀ ಧ.ಮ. ಕಾಲೇಜು ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮ – ವಿಶೇಷ ಸಾಧಕರಿಗೆ ಸನ್ಮಾನ – ಚಿಗುರು ಪತ್ರಿಕೆ ಅನಾವರಣ

ಉಜಿರೆ : ಇಲ್ಲಿಯ ಶ್ರೀ ಧ.ಮ. ಕಾಲೇಜು ವಾರ್ಷಿಕೋತ್ಸವ, ವಿಶೇಷ ಸಾಧಕರಿಗೆ ಸನ್ಮಾನ – ಚಿಗುರು ಪತ್ರಿಕೆ ಅನಾವರಣ ಕಾರ್ಯಕ್ರಮವು ಮಾ.30ರಂದು ನಡೆಯಿತು.

ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ ಪ್ರೋ. ಪಿ.ಎಲ್. ಧರ್ಮ ಉಪಕುಲಪತಿಗಳು ಚಿಗುರು ಪತ್ರಿಕೆ ಅನಾವರಣಗೊಳಿಸಿ ಮಾತನಾಡಿ ತಂತ್ರಜ್ಞಾನ ಹೇಗಿರಬೇಕು ಎಂಬುವುದನ್ನು ಪ್ರಯೋಗ ಮಾಡಿದ್ದು ದಿ. ಯಶೋವರ್ಮ ರವರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ ಸಹನೆ ಹಾಗೂ ಸಹಬಾಳ್ವೆಯನ್ನು ಕಲಿಸಿ ಕೊಡುತ್ತದೆ ಎಂದರು.ಅತಿಥಿ ಅಭ್ಯಾಗತರಿಂದ ನಿವೃತ್ತ ಪ್ರಾಧ್ಯಾಪಕರಿಗೆ, ರಾಂಕ್ ವಿಜೇತರಿಗೆ, ಪಿ.ಹೆಚ್.ಡಿ ಮತ್ತು ವಿಶೇಷ ಸಾಧಕ ಅಧ್ಯಾಪಕರಿಗೆ, ವಿಶೇಷ ಸಾಧಕ ವಿದ್ಯಾರ್ಥಿಗಳಿಗೆ, ಎನ್.ಸಿ.ಸಿ /ಎನ್.ಎಸ್.ಎಸ್ / ಕ್ರೀಡಾ ವಿಭಾಗದ ರಾಷ್ಟ್ರಮಟ್ಟದ ಸಾಧಕರಿಗೆ ಸನ್ಮಾನ ಮಾಡಲಾಯಿತು.

ವೇದಿಕೆಯಲ್ಲಿ ಡಿ. ಹರ್ಷೇಂದ್ರ ಹೆಗ್ಡೆ, ಪ್ರಾಂಶುಪಾಲರಾದ ಡಾ.ಬಿ.ಎ. ಕುಮಾರ ಹೆಗ್ಡೆ, ಉಪಪ್ರಾಂಶುಪಾಲರಾದ ಶಶಿಶೇಖರ ಕಾಕತ್ಕರ್ ಉಪಸ್ಥಿತರಿದ್ದರು. ಸಹ ಪ್ರಾಧ್ಯಾಪಕ ಡಾ. ಶ್ರೀಧರ ಭಟ್ಟ್ ನಿರೂಪಿಸಿ, ಕಾಲೇಜು ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಪ್ರಾಂಶುಪಾಲರಾದ ಡಾ.ಬಿ.ಎ. ಕುಮಾರ ಹೆಗ್ಡೆ ಸ್ವಾಗತಿಸಿ ವರದಿ ವಾಚನ ಮಾಡಿದರು. ಉಪಪ್ರಾಂಶುಪಾಲರಾದ ಶಶಿಶೇಖರ ಕಾಕತ್ಕರ್ ಧನ್ಯವಾದವಿತ್ತರು.

Related posts

ಜಿನ ಭಜನಾ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya

ಬೆಳಾಲು : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಆರೋಪಿಗಳ ಮನೆಯಿಂದ ಬೈಕ್, ಬಟ್ಟೆ ಕತ್ತಿ ವಶಕ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಸಿದ್ಧಿಶ್ರೀ ಸಭಾಭವನಕ್ಕೆ ಸಹಾಯಧನ ಚೆಕ್ ಹಸ್ತಾಂತರ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಯುವಸಿರಿ- ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ ಸುಮಾರು 500ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಗದ್ದೆಯಲ್ಲಿ ನೇಜಿನಾಟಿ

Suddi Udaya

ರುಡ್‌ಸೆಟ್ ಸಂಸ್ಥೆ ವತಿಯಿಂದ ಕೃಷಿ ಉದ್ಯಮಿ–ಕೋಳಿ ಸಾಕಾಣಿಕೆ ತರಬೇತಿಯ ಸಮಾರೋಪ

Suddi Udaya
error: Content is protected !!