July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಪುತ್ತೂರು ನರಿಮೊಗರು ಕೊಡಿನೀರುನಲ್ಲಿ, ಮಾರುತಿ ಕಾರುಗಳ ನಡುವೆ ಅಪಘಾತ: ಕೊಕ್ಕಡದ ಮಹಿಳೆಗೆ ಗಾಯ ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಪುತ್ತೂರು ತಾಲೂಕು ನರಿಮೊಗರು ಗ್ರಾಮದ ಕೊಡಿನೀರು ಎಂಬಲ್ಲಿ, ಮಾರುತಿ ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಕೊಕ್ಕಡದ ಮಹಿಳೆ ಗಾಯಗೊಂಡು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಕೊಕ್ಕಡ ನಿವಾಸಿ ದಿನೇಶ್‌ ಕುಮಾರ್‌ ಎಂಬವರು ಪೊಲೀಸ್ ರಿಗೆ ನೀಡಿದ ದೂರಿನಲ್ಲಿ, ಮಾ. 30 ರಂದು ಬೆಳಿಗ್ಗೆ, ಕೆ.ಎಂ. ಅಬೂಬಕ್ಕರ್‌ ಎಂಬವರು ತನ್ನ ಓಮ್ನಿ ಕಾರನ್ನು ಪುತ್ತೂರು ತಾಲೂಕು ನರಿಮೊಗರು ಗ್ರಾಮದ ಕೊಡಿನೀರು ಎಂಬಲ್ಲಿ, ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಹೆದ್ದಾರಿಯಲ್ಲಿ ಚಲಾಯಿಸಿದ ಪರಿಣಾಮ, ನಾನು ಚಾಲಕನಾಗಿ ನನ್ನ ತಾಯಿ ಲೀಲಾವತಿ ಮತ್ತು ಅಜ್ಜಿ ವಿಜಯಲಕ್ಷ್ಮಿ ಎಂಬವರನ್ನು ಪ್ರಯಾಣಿಕರನ್ನಾಗಿ ಕುಳ್ಳಿರಿಸಿ, ಹೋಗುತ್ತಿದ್ದ ಓಮ್ನಿ ಕಾರಿಗೆ ಡಿಕ್ಕಿ ಹೊಡೆದು ಅಪಘಾತವಾಗಿರುತ್ತದೆ. ಪರಿಣಾಮ ವಿಜಯಲಕ್ಷ್ಮಿರವರಿಗೆ ಗಾಯಗಳಾಗಿ, ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಎರಡೂ ವಾಹನಗಳು ಜಖಂಗೊಂಡಿರುತ್ತವೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ: 40/2024 ಕಲಂ: 279, 337 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಬೆ

Suddi Udaya

ಸಿಯೋನ್ ಆಶ್ರಮ: ರಾಷ್ಟ್ರೀಯ ಸೇವಾ ಯೋಜನಾ ಶಿಬಿರ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ

Suddi Udaya

ನಾಳ : ತೀವ ಡ್ಯಾನ್ಸ್ ಕ್ಲಾಸ್ ಶುಭಾರಂಭ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!