25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯದ ಮೀನುಗಳಿಗೆ ಭಕ್ತರು ಅರಳು ಹಾಕುವುದಕ್ಕೆ ನಿಷೇಧ- ದೇವಾಲಯದ ಆಡಳಿತ ನಿಧಾ೯ರ

ಶಿಶಿಲ: ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯ ದಿನ ನಿತ್ಯ ಊರ ಪರವೂರ ಭಕ್ತಾದಿಗಳು ಆಗಮಿಸುತ್ತಾರೆ. ಶಿಶಿಲ ದೇವಾಲಯದಲ್ಲಿ ಸ್ವಾಮಿಯ ದರ್ಶನದಂತೆ ಮೀನುಗಳಿಗೂ ಹರಕೆ ಇಲ್ಲಿ ವಿಶೇಷ.

ಇತ್ತೀಚೆಗೆ ಇಲ್ಲಿ ಹರಿಯುತ್ತಿರುವ ಕಪಿಲಾ ನದಿಯಲ್ಲಿ ನಿತ್ಯ ಹರಿವು ನಿಂತಿದೆ. ಕಪಿಲಾ ನದಿಯಲ್ಲಿ ನೀರಿನ ಪ್ರಮಾಣ ಕುಸಿದಿದೆ. ನದಿಯ ಮೀನುಗಳಿಗೆ ಅತಿಯಾದ ಆಹಾರ ಹಾಕುವುದರಿಂದ ನೀರು ಕಲುಷಿತವಾಗಿ ದೇವರ ಮೀನುಗಳಿಗೆ ತೊಂದರೆ ಆಗಿದೆ. ಇದನ್ನು ಅರಿತ ದೇವಾಲಯದ ಆಡಳಿತ, ಮೀನುಗಳಿಗೆ ಭಕ್ತರು ಅರಳು ಹಾಕುವುದನ್ನು ನಿಷೇಧ ಮಾಡಿದೆ.

*ರಾಸಾಯನಿಕಯುಕ್ತ ಅರಳು: ಇತ್ತೀಚಿನ ದಿನಗಳಲ್ಲಿ ಎಲ್ಲೂ ಕಂಡುಬರುವ ರಾಸಾಯನಿಕಯುಕ್ತ ವಸ್ತುಗಳಲ್ಲಿ ಅರಳೂ ಸೇರಿಕೊಂಡಿದೆ. ಆರಳಿಗೂ ರಾಸಾಯನಿಕ ವಸ್ತು ಇದೆ ಎಂಬ ಸಂಶಯ ಮೂಡಲಾರಂಬಿಸಿದೆ. ಮೀನುಗಳ ಆಹಾರದಿಂದ ಆರೋಗ್ಯದ ಮೇಲೆ ಪರಿಣಾಮ ಬೀರಬಲ್ಲ ಮತ್ತು ನೀರೂ ಕಲುಷಿತ ಮಾಡಬಲ್ಲ ಅರಳನ್ನು ನಿಷೇಧ ಮಾಡಲಾಗಿದೆ. ಹಿಂದಿನ ಪರಂಪರೆಯಂತೆ ಬಿಳಿ ಅಕ್ಕಿಯನ್ನು ಅಗತ್ಯ ಕಂಡು ಬಂದಲ್ಲಿ ಅಲ್ಪಪ್ರಮಾಣದಲ್ಲಿ ಹಾಕಬಹುದು ಮತ್ತು ಇತರ ಯಾವುದೇ ತಿಂಡಿಯನ್ನು ಹಾಕಬಾರದು. ಈ ಕುರಿತು ಎಲ್ಲಾ ಊರಿನ ಪರ ಊರಿನ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳು ಮತ್ತು ಮತ್ಸ್ಯ ಹಿತರಕ್ಷಣಾ ವೇದಿಕೆ ವಿನಂತಿ ಮಾಡಿದೆ.

Related posts

ಧಮ೯ಸ್ಥಳ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ಮತ್ತು ಯೋಧ ನಮನ ಕಾರ್ಯಕ್ರಮ

Suddi Udaya

ಬಳಂಜ: ತಾಯಿ-ಮಗನಿಗೆ ಜೀವ ಬೆದರಿಕೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ದ.ಕ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ಕೊರಗಪ್ಪ ನಾಯ್ಕ ಮುಂಡಾಜೆ ನೇಮಕ

Suddi Udaya

ಗ್ರಾ.ಪಂ. ಮಟ್ಟದ ಸಂಜೀವಿನಿ ಮುಖ್ಯಪುಸ್ತಕ ಬರಹಗಾರರು ಹಾಗೂ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮಹಾ ಒಕ್ಕೂಟದಿಂದ ಬೆಂಗಳೂರುನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ

Suddi Udaya

ಉಜಿರೆ ಯು.ಎಸ್ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya
error: Content is protected !!