September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯದ ಮೀನುಗಳಿಗೆ ಭಕ್ತರು ಅರಳು ಹಾಕುವುದಕ್ಕೆ ನಿಷೇಧ- ದೇವಾಲಯದ ಆಡಳಿತ ನಿಧಾ೯ರ

ಶಿಶಿಲ: ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯ ದಿನ ನಿತ್ಯ ಊರ ಪರವೂರ ಭಕ್ತಾದಿಗಳು ಆಗಮಿಸುತ್ತಾರೆ. ಶಿಶಿಲ ದೇವಾಲಯದಲ್ಲಿ ಸ್ವಾಮಿಯ ದರ್ಶನದಂತೆ ಮೀನುಗಳಿಗೂ ಹರಕೆ ಇಲ್ಲಿ ವಿಶೇಷ.

ಇತ್ತೀಚೆಗೆ ಇಲ್ಲಿ ಹರಿಯುತ್ತಿರುವ ಕಪಿಲಾ ನದಿಯಲ್ಲಿ ನಿತ್ಯ ಹರಿವು ನಿಂತಿದೆ. ಕಪಿಲಾ ನದಿಯಲ್ಲಿ ನೀರಿನ ಪ್ರಮಾಣ ಕುಸಿದಿದೆ. ನದಿಯ ಮೀನುಗಳಿಗೆ ಅತಿಯಾದ ಆಹಾರ ಹಾಕುವುದರಿಂದ ನೀರು ಕಲುಷಿತವಾಗಿ ದೇವರ ಮೀನುಗಳಿಗೆ ತೊಂದರೆ ಆಗಿದೆ. ಇದನ್ನು ಅರಿತ ದೇವಾಲಯದ ಆಡಳಿತ, ಮೀನುಗಳಿಗೆ ಭಕ್ತರು ಅರಳು ಹಾಕುವುದನ್ನು ನಿಷೇಧ ಮಾಡಿದೆ.

*ರಾಸಾಯನಿಕಯುಕ್ತ ಅರಳು: ಇತ್ತೀಚಿನ ದಿನಗಳಲ್ಲಿ ಎಲ್ಲೂ ಕಂಡುಬರುವ ರಾಸಾಯನಿಕಯುಕ್ತ ವಸ್ತುಗಳಲ್ಲಿ ಅರಳೂ ಸೇರಿಕೊಂಡಿದೆ. ಆರಳಿಗೂ ರಾಸಾಯನಿಕ ವಸ್ತು ಇದೆ ಎಂಬ ಸಂಶಯ ಮೂಡಲಾರಂಬಿಸಿದೆ. ಮೀನುಗಳ ಆಹಾರದಿಂದ ಆರೋಗ್ಯದ ಮೇಲೆ ಪರಿಣಾಮ ಬೀರಬಲ್ಲ ಮತ್ತು ನೀರೂ ಕಲುಷಿತ ಮಾಡಬಲ್ಲ ಅರಳನ್ನು ನಿಷೇಧ ಮಾಡಲಾಗಿದೆ. ಹಿಂದಿನ ಪರಂಪರೆಯಂತೆ ಬಿಳಿ ಅಕ್ಕಿಯನ್ನು ಅಗತ್ಯ ಕಂಡು ಬಂದಲ್ಲಿ ಅಲ್ಪಪ್ರಮಾಣದಲ್ಲಿ ಹಾಕಬಹುದು ಮತ್ತು ಇತರ ಯಾವುದೇ ತಿಂಡಿಯನ್ನು ಹಾಕಬಾರದು. ಈ ಕುರಿತು ಎಲ್ಲಾ ಊರಿನ ಪರ ಊರಿನ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳು ಮತ್ತು ಮತ್ಸ್ಯ ಹಿತರಕ್ಷಣಾ ವೇದಿಕೆ ವಿನಂತಿ ಮಾಡಿದೆ.

Related posts

ಓಡೀಲು‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಎಸ್‌.ಡಿ.ಎಂ. ಐಟಿಐ ವೇಣೂರಿನಲ್ಲಿ ಯಂತ್ರಗಳ ಬಿಡಿಭಾಗ ತಯಾರಿಕಾ ಕಂಪೆನಿಯಿಂದ ಕ್ಯಾಂಪಸ್ ಸಂದರ್ಶನ

Suddi Udaya

ಉಜಿರೆ ಎಸ್ .ಡಿ .ಎಂ .ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿಗೆ ಹಾರಿ ದಂಪತಿಗಳು ಆತ್ಮಹತ್ಯೆ: ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಮೃತದೇಹ ಪತ್ತೆ

Suddi Udaya

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ನಿಂದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಕಂಬಳದ ನಂದಳಿಕೆಯ ಪಾಂಡು ಕೋಣಕ್ಕೆ ಗೌರವಾರ್ಪಣೆ

Suddi Udaya
error: Content is protected !!