23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿಮೊಗ್ರು ಪುರುಷರ ಬಳಗ ವತಿಯಿಂದ ರಾಶಿ ಪೂಜೆ

ಸುಲ್ಕೇರಿಮೊಗ್ರು ಪುರುಷರ ಬಳಗ ವತಿಯಿಂದ ಗರಡಿ ವಠಾರದಲ್ಲಿ ರಾಶಿ ಪೂಜೆಯು ಭಕ್ತಿ ಶ್ರದ್ಧೆಯಿಂದ ವಿಜೃಂಭಣೆಯಿಂದ ಮಾ.30ರಂದು ಜರಗಿತು.

ಸುಗ್ಗಿ ಹುಣ್ಣಿಮೆ ದಿನ ಮೂರು ದಿನಗಳ ಕಾಲ ವಿವಿಧ ವೇಷ ಧರಿಸಿ ಗ್ರಾಮದಲ್ಲಿ ಮನೆ ಮನೆಗೆ ಭೇಟಿ ನೀಡಿ ಕದ್ರಿ ದೇವಸ್ಥಾನದಿಂದ ತೀರ್ಥ ಪ್ರಸಾದ ತಂದು ರಾಶಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಹಿರಿಯ ವೇಷಧಾರಿಗಳಾದ ರಾಮಣ್ಣ ಮೂಲ್ಯ ಅಂಬಡೆದಡಿ ಮತ್ತು ಓಬಯ್ಯ ದೇವಾಡಿಗ ಇವರಿಗೆ ಸನ್ಮಾನ ಮಾಡಲಾಯಿತು ಹಾಗೂ ಉಚಿತ ಡೋಲು ಸೇವೆ ಸಲ್ಲಿಸಿದ ಪ್ರಸಾದ್ ದಾಯಿಗುಡ್ಡೆ ಇವರನ್ನು ಗೌರವಿಸಲಾಯಿತು.

ಸಂದೀಪ್ ಪಟ್ಲ ನೇತೃತ್ವದಲ್ಲಿ ನಡೆದ ಈ ರಾಶಿ ಪೂಜೆಯಲ್ಲಿ ಊರ ಹಾಗೂ ಪರವೂರ ನೂರಾರು ಭಕ್ತರು ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಎಂ. ಗಂಗಾಧರ ಮಿತ್ತಮಾರು ಸೋಮನಾಥ ಬಂಗೇರ ವರ್ಪಳೆ, ಗುರುವಪ್ಪ ಪೂಜಾರಿ, ಪಟ್ಲ ರಾಮಪ್ಪ ಸಣ್ಣಪಟ್ಲ, ನಾರಾಯಣ ಪರಂಟ್ಯಾಲ, ಪುರಂದರ ಪಡುಬೈಲು, ಅಶೋಕ ಕಾಡಂಗೆ, ಅಳದಂಗಡಿ ಸಿಎ ಬ್ಯಾಂಕ್ ಉಪಾಧ್ಯಕ್ಷ ಜನಾರ್ಧನ ಕೊಡಂಗೆ, ರವಿ ಸಾಲಿಯಾನ್, ನಂದನ್ , ಗಣೇಶ್ ಕಾಡಂಗೆ, ರಾಜೇಂದ್ರ ಸಾಲಿಯಾನ್, ಧರ್ಣಪ್ಪ, ಪ್ರಮೋದ್, ವಸಂತ ಅಂಚನ್, ಆನಂದ ಅಂಚನ್, ಸಂಕೇತ್ ವರ್ಷಾಳೆ, ಕಿಶೋರ್ ,ಸತೀಶ್ ,ರಮೇಶ್, ಗೇತನ್, ಶಿವಪ್ಪ ಕೊಲ್ಲಂಗೆ ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳಿಂದ ಪರಿಶೀಲನೆ: ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋದಾಮಿಗೆ ಬೀಗ

Suddi Udaya

ಧರ್ಮಸ್ಥಳಕ್ಕೆ ಬಂದಿದ್ದ ಮಹಿಳೆಯ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

Suddi Udaya

ವೇಣೂರು ಮಹಿಳಾ ಮಂಡಲದ ನೂತನ ಅಧ್ಯಕ್ಷರಾಗಿ ಶ್ರೀಮತಿ ಅಮಿತಾ ಶೇಖರ್ ಆಯ್ಕೆ

Suddi Udaya

ಕಲ್ಮಂಜ: ನಿಡಿಗಲ್ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ

Suddi Udaya

ನಾರಾವಿ:”ಸನ್ನಿಧಿ” ಪ್ಯಾಲೇಸ್ ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯನ್ ಮತ್ತು ಮಕ್ಕಳಿಂದ ದೈಪಾಲಬೆಟ್ಟು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಮುಖಾಯಾಮ ಮಂಟಪ ದುರಸ್ತಿಗೆ ಮರಮಟ್ಟು ಹಾಗೂ ಭಂಡಾರಕ್ಕೆ ಪಲ್ಲಕ್ಕಿ ಸಮರ್ಪಣೆ

Suddi Udaya

ಸಚಿವ ಹೆಚ್.ಡಿ ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ: ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ಮಾತುಕತೆ

Suddi Udaya
error: Content is protected !!