23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿಮೊಗ್ರು ಪುರುಷರ ಬಳಗ ವತಿಯಿಂದ ರಾಶಿ ಪೂಜೆ

ಸುಲ್ಕೇರಿಮೊಗ್ರು ಪುರುಷರ ಬಳಗ ವತಿಯಿಂದ ಗರಡಿ ವಠಾರದಲ್ಲಿ ರಾಶಿ ಪೂಜೆಯು ಭಕ್ತಿ ಶ್ರದ್ಧೆಯಿಂದ ವಿಜೃಂಭಣೆಯಿಂದ ಮಾ.30ರಂದು ಜರಗಿತು.

ಸುಗ್ಗಿ ಹುಣ್ಣಿಮೆ ದಿನ ಮೂರು ದಿನಗಳ ಕಾಲ ವಿವಿಧ ವೇಷ ಧರಿಸಿ ಗ್ರಾಮದಲ್ಲಿ ಮನೆ ಮನೆಗೆ ಭೇಟಿ ನೀಡಿ ಕದ್ರಿ ದೇವಸ್ಥಾನದಿಂದ ತೀರ್ಥ ಪ್ರಸಾದ ತಂದು ರಾಶಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಹಿರಿಯ ವೇಷಧಾರಿಗಳಾದ ರಾಮಣ್ಣ ಮೂಲ್ಯ ಅಂಬಡೆದಡಿ ಮತ್ತು ಓಬಯ್ಯ ದೇವಾಡಿಗ ಇವರಿಗೆ ಸನ್ಮಾನ ಮಾಡಲಾಯಿತು ಹಾಗೂ ಉಚಿತ ಡೋಲು ಸೇವೆ ಸಲ್ಲಿಸಿದ ಪ್ರಸಾದ್ ದಾಯಿಗುಡ್ಡೆ ಇವರನ್ನು ಗೌರವಿಸಲಾಯಿತು.

ಸಂದೀಪ್ ಪಟ್ಲ ನೇತೃತ್ವದಲ್ಲಿ ನಡೆದ ಈ ರಾಶಿ ಪೂಜೆಯಲ್ಲಿ ಊರ ಹಾಗೂ ಪರವೂರ ನೂರಾರು ಭಕ್ತರು ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಎಂ. ಗಂಗಾಧರ ಮಿತ್ತಮಾರು ಸೋಮನಾಥ ಬಂಗೇರ ವರ್ಪಳೆ, ಗುರುವಪ್ಪ ಪೂಜಾರಿ, ಪಟ್ಲ ರಾಮಪ್ಪ ಸಣ್ಣಪಟ್ಲ, ನಾರಾಯಣ ಪರಂಟ್ಯಾಲ, ಪುರಂದರ ಪಡುಬೈಲು, ಅಶೋಕ ಕಾಡಂಗೆ, ಅಳದಂಗಡಿ ಸಿಎ ಬ್ಯಾಂಕ್ ಉಪಾಧ್ಯಕ್ಷ ಜನಾರ್ಧನ ಕೊಡಂಗೆ, ರವಿ ಸಾಲಿಯಾನ್, ನಂದನ್ , ಗಣೇಶ್ ಕಾಡಂಗೆ, ರಾಜೇಂದ್ರ ಸಾಲಿಯಾನ್, ಧರ್ಣಪ್ಪ, ಪ್ರಮೋದ್, ವಸಂತ ಅಂಚನ್, ಆನಂದ ಅಂಚನ್, ಸಂಕೇತ್ ವರ್ಷಾಳೆ, ಕಿಶೋರ್ ,ಸತೀಶ್ ,ರಮೇಶ್, ಗೇತನ್, ಶಿವಪ್ಪ ಕೊಲ್ಲಂಗೆ ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.

Related posts

ಮಲವಂತಿಗೆ : 38ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಚಿನ್ನೋತ್ಸವ ಪ್ರಾರಂಭ: 20 ಸಾವಿರದ ಡೈಮಂಡ್ ಖರೀದಿಗೆ 5 ಕಾರು ಗೆಲ್ಲುವ ಸುವರ್ಣಾವಕಾಶ

Suddi Udaya

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya

ಜ.4: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ಆಶ್ರಯದಲ್ಲಿ 15ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: 51 ನಾಯಿ ಮರಿಗಳು, 32 ಬೆಕ್ಕು ಮರಿಗಳ ದತ್ತು ಸ್ವೀಕಾರ

Suddi Udaya
error: Content is protected !!