25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿಮೊಗ್ರು ಪುರುಷರ ಬಳಗ ವತಿಯಿಂದ ರಾಶಿ ಪೂಜೆ

ಸುಲ್ಕೇರಿಮೊಗ್ರು ಪುರುಷರ ಬಳಗ ವತಿಯಿಂದ ಗರಡಿ ವಠಾರದಲ್ಲಿ ರಾಶಿ ಪೂಜೆಯು ಭಕ್ತಿ ಶ್ರದ್ಧೆಯಿಂದ ವಿಜೃಂಭಣೆಯಿಂದ ಮಾ.30ರಂದು ಜರಗಿತು.

ಸುಗ್ಗಿ ಹುಣ್ಣಿಮೆ ದಿನ ಮೂರು ದಿನಗಳ ಕಾಲ ವಿವಿಧ ವೇಷ ಧರಿಸಿ ಗ್ರಾಮದಲ್ಲಿ ಮನೆ ಮನೆಗೆ ಭೇಟಿ ನೀಡಿ ಕದ್ರಿ ದೇವಸ್ಥಾನದಿಂದ ತೀರ್ಥ ಪ್ರಸಾದ ತಂದು ರಾಶಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಹಿರಿಯ ವೇಷಧಾರಿಗಳಾದ ರಾಮಣ್ಣ ಮೂಲ್ಯ ಅಂಬಡೆದಡಿ ಮತ್ತು ಓಬಯ್ಯ ದೇವಾಡಿಗ ಇವರಿಗೆ ಸನ್ಮಾನ ಮಾಡಲಾಯಿತು ಹಾಗೂ ಉಚಿತ ಡೋಲು ಸೇವೆ ಸಲ್ಲಿಸಿದ ಪ್ರಸಾದ್ ದಾಯಿಗುಡ್ಡೆ ಇವರನ್ನು ಗೌರವಿಸಲಾಯಿತು.

ಸಂದೀಪ್ ಪಟ್ಲ ನೇತೃತ್ವದಲ್ಲಿ ನಡೆದ ಈ ರಾಶಿ ಪೂಜೆಯಲ್ಲಿ ಊರ ಹಾಗೂ ಪರವೂರ ನೂರಾರು ಭಕ್ತರು ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಎಂ. ಗಂಗಾಧರ ಮಿತ್ತಮಾರು ಸೋಮನಾಥ ಬಂಗೇರ ವರ್ಪಳೆ, ಗುರುವಪ್ಪ ಪೂಜಾರಿ, ಪಟ್ಲ ರಾಮಪ್ಪ ಸಣ್ಣಪಟ್ಲ, ನಾರಾಯಣ ಪರಂಟ್ಯಾಲ, ಪುರಂದರ ಪಡುಬೈಲು, ಅಶೋಕ ಕಾಡಂಗೆ, ಅಳದಂಗಡಿ ಸಿಎ ಬ್ಯಾಂಕ್ ಉಪಾಧ್ಯಕ್ಷ ಜನಾರ್ಧನ ಕೊಡಂಗೆ, ರವಿ ಸಾಲಿಯಾನ್, ನಂದನ್ , ಗಣೇಶ್ ಕಾಡಂಗೆ, ರಾಜೇಂದ್ರ ಸಾಲಿಯಾನ್, ಧರ್ಣಪ್ಪ, ಪ್ರಮೋದ್, ವಸಂತ ಅಂಚನ್, ಆನಂದ ಅಂಚನ್, ಸಂಕೇತ್ ವರ್ಷಾಳೆ, ಕಿಶೋರ್ ,ಸತೀಶ್ ,ರಮೇಶ್, ಗೇತನ್, ಶಿವಪ್ಪ ಕೊಲ್ಲಂಗೆ ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಅಕ್ರಮ ಕೂಟ ಸೇರಿ ಗಲಾಟೆ ಪ್ರಕರಣ6 ಜನರ ಬಂಧನ: ಜಮೀನು ಮಂಜೂರು

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಶಿರ್ಲಾಲಿನ ಶಾಲ್ವಿ ಜೈನ್

Suddi Udaya

ಉಜಿರೆ “ಕನಸಿನ ಮನೆ” ಕೆ. ಮೋಹನ್ ಕುಮಾರ್‌ರ ವಿಭಿನ್ನ ಕಲ್ಪನೆಯಲ್ಲಿ ತಲೆಎತ್ತಿ ನಿಂತಿದೆ-ಬ್ರಹ್ಮಕಲಶೋತ್ಸವದಲ್ಲಿ ಮನಸೆಳೆಯುತ್ತಿರುವ “ಸುಪ್ರಸಾದ” ಭೋಜನಾಲಯ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya
error: Content is protected !!